ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚನೆ…!

ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚಿಸುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು, ಈ ಸಂಬ0ಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದು, ಸಾಸ್ತಾನ ಕುಂಜಿಕೆರೆ ರಸ್ತೆಯ ರಾಕೇಶ ಎಸ್ ಹಾಗೂ ಶಿರಸಿಯ ಚರಣ ಬಾಬು ಮೇಸ್ತ ಬಂಧಿತ ಆರೋಪಿಗಳು. ಆರೋಪಿಗಳು ನಕಲಿ ವಿಮೆ ಮೂಲಕ ಕೋಟ್ಯಂತರ ರೂ. ಹಣ ವಂಚನೆ ಎಸಗಿದ್ದಾರೆ ಎಂದಿದ್ದಾರೆ.

2024ರ ನ.25ರಂದು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಬಾಡಿ – ಮಂಡಾಡಿ ಗ್ರಾಮದ ಹುಣ್ಸೆಮಕ್ಕಿ ಎಂಬಲ್ಲಿ ಶಾಲಾ ವಾಹನವೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಬಗ್ಗೆ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುಂದಾಪುರ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು ರಿಕ್ಷಾದ ಚಾಲಕ ವಿಮಾ ಪರಿಹಾರವಾಗಿ 15,95,000ರೂ. ಹಣ ಕೋರಿಕೊಂಡಿದ್ದಾರೆ. ಈ ಸಂಬ0ಧ ವಿಮಾ ಕಂಪೆನಿಯವರು ಪರಿಶೀಲಿಸಿದಾಗ ಶಾಲಾ ಬಸ್ಸಿನ ವಿಮಾ ಪಾಲಿಸಿಯು ನಕಲಿ ಆಗಿರುವುದು ಕಂಡುಬ0ದಿದೆ. ನಕಲಿ ವಿಮಾ ಪಾಲಿಸಿಯನ್ನು ಸೃಷ್ಟಿಸಿ ಠಾಣೆಗೆ ಹಾಗೂ ನ್ಯಾಯಾಲಯಕ್ಕೆ ಹಾಜರುಪಡಿಸಿ ಈ ಮೂಲಕ ವಿಮಾ ಕಂಪೆನಿಗೆ ಮೋಸ ಮಾಡಿರುವುದಾಗಿ ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಕಂಪೆನಿಯ ಮೇನೇಜರ್ ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಶೇಷ ತಂಡ ತನಿಖೆ ನಡೆಸಿದಾಗ ಈ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!