ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮನೆಯಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ; ಸಾವಿರಾರು ರೂ ಮೌಲ್ಯದ ಸೊತ್ತುಗಳು ನಷ್ಟ…!

ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಾವಿರಾರು ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ನಾವೂರದಲ್ಲಿ ನಡೆದಿದೆ.

ನಾವೂರ ಗ್ರಾಮದ ಕನಪಾದೆ ನಿವಾಸಿ ದಿನೇಶ್ ಪೂಜಾರಿ ಅವರ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹಚ್ಚಿದ್ದು ಮುಂಜಾನೆ ಸುಮಾರು 3 ಗಂಟೆ ವೇಳೆ ಮನೆಯಲ್ಲಿ ಮಗು ಜೋರಾಗಿ ಆಳುತ್ತಿದ್ದಾಗ ಮನೆಮಂದಿಗೆ ಎಚ್ಚರವಾಗಿ ನೋಡಿದಾಗ ಬೆಂಕಿ ಕಾಣಿಸಿಕೊಂಡಿದೆ. ಅದಾಗಲೇ ಮನೆಯಲ್ಲಿ ದಾಸ್ತಾನು ಇರಿಸಿದ್ದ ಅಕ್ಕಿ ಗೋಣಿ ಚೀಲಗಳು ಮಕ್ಕಳ ಶಾಲಾ ಸಮವಸ್ತ್ರಗಳು, ಶಾಲಾ ಪಠ್ಯ ಪುಸ್ತಕಗಳು ಮತ್ತು ಮನೆಯವರ ಇತರ ಬಟ್ಟೆ ಬರೆಗಳು ಕೂಡ ಬೆಂಕಿಗೆ ಆಹುತಿಯಾಗಿದೆ. ಘಟನೆಯಿಂದ ಸಾವಿರಾರು ರೂ ಮೌಲ್ಯದ ಸೊತ್ತುಗಳು ನಷ್ಟವಾಗಿದ್ದು, ಗ್ರಾಮ ಪಂಚಾಯತ್ ಅಧಿಕಾರಿಗಳು ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!