ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪುದು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡುವ ಚಿಂತನೆ!!

ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಗೆ ತಾಗಿಕೊಂಡಿರುವ ಪುದು ಗ್ರಾಮಪಂಚಾಯತ್ ವ್ಯಾಪ್ತಿಯ ಕಸ ವಿಲೇವಾರಿಗಾಗಿ ಕೋಡಿ ಮಜಲು ತೇವು ಎಂಬಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣವಾಗುತ್ತಿದ್ದು ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದೆ, ಅಂದುಕೊಂಡಂತೆ ಬಾಕಿ ಉಳಿದಿರುವ ಸಣ್ಣ ಪುಟ್ಟ ಕಾಮಗಾರಿಗಳು ನಡೆದರೆ ನವೆಂಬರ್ ತಿಂಗಳಲ್ಲಿ ಘಟಕದ ಉದ್ಘಾಟನೆಯಾಗಲಿದೆ.

ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಗ್ರಾಮಪಂಚಾಯತ್ ಆಗಿರುವುದರಿಂದ ಇಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವುದು ಕಷ್ಟದ ಕೆಲಸವಾಗಿದೆ, ಜೊತೆಗೆ ಹೆದ್ದಾರಿ ಬದಿಯಲ್ಲಿ ಸಿಕ್ಕ ಸಿಕ್ಕ ಕಡೆಗಳಲ್ಲಿ ಕಸ ಎಸೆಯಲಾಗುತ್ತಿದ್ದು, ಕಸ ಎಸೆಯುವುದನ್ನು ತಡೆಯುವ ದೃಷ್ಟಿಯಿಂದ ಮತ್ತು ಸ್ವಚ್ಚತಾ ಕಾರ್ಯದ ಬಗ್ಗೆ ಗ್ರಾಮ ಪಂಚಾಯತ್ ವಿಶೇಷ ಅಭಿಯಾನದ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡಿ ಯಶಸ್ವಿಯಾಗಿತ್ತಾದರೂ ಸಂಪೂರ್ಣ ತ್ಯಾಜ್ಯ ಮುಕ್ತವಾದ ಗ್ರಾಮವನ್ನಾಗಿ ಮಾಡುವ ಉದ್ದೇಶದಿಂದ ಕೋಡಿಮಜಲು ತೇವು ಎಂಬಲ್ಲಿ ಘಟಕ ನಿರ್ಮಾಣ ಮಾಡಲಾಗಿದೆ.

ಇನ್ನೇನು ತಿಂಗೊಳಗೆ ಸಕಲ ವ್ಯವಸ್ಥೆಯ ಸಂಪೂರ್ಣ ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯದ ವಿಲೇವಾರಿ ಮಾಡುವ ಬಗ್ಗೆ ಇಲ್ಲಿನ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ರುಕ್ಸಾನಾ, ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್, ಸೇರಿದಮತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!