ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

ಕದ್ರಿ ಯಕ್ಷ ಬಳಗವು ಈ ವರ್ಷದ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಪ್ರಶಸ್ತಿಯನ್ನು ಪಾವಂಜೆ ಮೇಳದ ಪ್ರಧಾನ ವೇಷಧಾರಿ, ಪ್ರಬಂದಕ ಡಿ.ಮಾಧವ ಬಂಗೇರ ಕೊಳತ್ತಮಜಲು ಅವರಿಗೆ ನೀಡಿ ಗೌರವಿಸಲಿದೆ.

ಇವರು ಕಳೆದ ಮೂರು ದಶಕಗಳಿಂದ ಯಕ್ಷಗಾನ ರಂಗದಲ್ಲಿ ಶ್ರೀರಾಮ, ಶ್ರೀ ಕೃಷ್ಣ, ಶ್ರೀ ವಿಷ್ಣು, ಜಾಬಾಲಿ ಮೊದಲಾದ ಸಾತ್ವಿಕ ಪಾತ್ರಗಳನ್ನು ನಿರ್ವಹಿಸಿ, “ಮಾನಿಷಾದ” ಪ್ರಸಂಗದ ಶ್ರೀ ರಾಮನ ಪಾತ್ರ ನಿರ್ವಹಣೆಯಲ್ಲಿ ಸಿದ್ದಿ ಪ್ರಸಿದ್ದಿ ಹೊಂದಿರುವ “ಯಕ್ಷ ರಾಮ” ಬಿರುದು ಪಡೆದ ಸರಳ ಸಜ್ಜನಿಕೆಯ ಕಲಾವಿದರಾಗಿದ್ದಾರೆ. ಕಟೀಲು ಮೇಳದಲ್ಲಿ ಕಲಾ ಜೀವನ ಆರಂಭ ಮಾಡಿ ಒಂದೂವರೆ ದಶಕ ಸೇವೆ ಸಲ್ಲಿಸಿ, ಬಪ್ಪನಾಡು, ಸುಂಕದಕಟ್ಟೆ ಮೇಳಗಳಲ್ಲಿ ತಿರುಗಾಟ ಅನುಭವ ಪಡೆದವರು. ಪಟ್ಲ ಭಾಗವತರ ನೆಚ್ಚಿನ ಕಲಾವಿದನಾಗಿ ಬೆಳೆದು ಪಾವಂಜೆ ಮೇಳದಲ್ಲಿ ಕಲಾ ಯಾನ ಮುಂದುವರಿಸುತ್ತಿರುವ ಇವರು ಹಲವಾರು ಯಕ್ಷಗಾನ ಬಯಲಾಟ, ತಾಳಮದ್ದಳೆ, ಗಾನ -ನಾಟ್ಯ ವೈಭವಗಳನ್ನು ಸಂಯೋಜಿಸಿದ್ದಾರೆ. ನಿರೂಪಕರಾಗಿಯೂ ಜನಪ್ರಿಯತೆ ಗಳಿಸಿದ್ದಾರೆ. ಕದ್ರಿ ಕಂಬಳ ಗುತ್ತಿನ ಯಜಮಾನರಾಗಿ ಹಲವು ದಶಕ ಗಳ ಕಾಲ ಇತಿಹಾಸ ಪ್ರಸಿದ್ದ ಸಂಪ್ರದಾಯಿಕ ಕದ್ರಿ ಕಂಬಳವನ್ನು ಸಂಘಟಿಸಿದ್ದ ಹಿರಿಯ ಹವ್ಯಾಸಿ ಅರ್ಥಧಾರಿ ಸ್ವಗ್ಗೀðಯ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಅವರ ಸ್ಮರಣಾರ್ಥ ಪ್ರಶಸ್ತಿ ನೀಡಲಾಗುತ್ತಿದೆ. ನವೆಂಬರ್ 4 ರಂದು ಕದ್ರಿ ದೇವಸ್ಥಾನದಲ್ಲಿ ಪಾವಂಜೆ ಮೇಳದ ಸೇವೆ ಬಯಲಾಟ “ಛಾಯಾ ನಂದನ” ನೂತನ ಪ್ರಸಂಗ ಪ್ರದರ್ಶನ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕದ್ರಿ ಯಕ್ಷ ಬಳಗದ ಕದ್ರಿ ನವನೀತ ಶೆಟ್ಟಿ ಹಾಗೂ ಪ್ರದೀಪ್ ಆಳ್ವ ಕದ್ರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಬಂಟ್ವಾಳ: ಅನುಮಾಸ್ಪವಾಗಿ ರಿಕ್ಷಾದಲ್ಲಿ ನಿಷೇಧಿತ ಎಂ.ಡಿ.ಎಂ..ಎ ಮಾರಾಟ..!

error: Content is protected !!