ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

ಕದ್ರಿ ಯಕ್ಷ ಬಳಗವು ಈ ವರ್ಷದ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಪ್ರಶಸ್ತಿಯನ್ನು ಪಾವಂಜೆ ಮೇಳದ ಪ್ರಧಾನ ವೇಷಧಾರಿ, ಪ್ರಬಂದಕ ಡಿ.ಮಾಧವ ಬಂಗೇರ ಕೊಳತ್ತಮಜಲು ಅವರಿಗೆ ನೀಡಿ ಗೌರವಿಸಲಿದೆ.

ಇವರು ಕಳೆದ ಮೂರು ದಶಕಗಳಿಂದ ಯಕ್ಷಗಾನ ರಂಗದಲ್ಲಿ ಶ್ರೀರಾಮ, ಶ್ರೀ ಕೃಷ್ಣ, ಶ್ರೀ ವಿಷ್ಣು, ಜಾಬಾಲಿ ಮೊದಲಾದ ಸಾತ್ವಿಕ ಪಾತ್ರಗಳನ್ನು ನಿರ್ವಹಿಸಿ, “ಮಾನಿಷಾದ” ಪ್ರಸಂಗದ ಶ್ರೀ ರಾಮನ ಪಾತ್ರ ನಿರ್ವಹಣೆಯಲ್ಲಿ ಸಿದ್ದಿ ಪ್ರಸಿದ್ದಿ ಹೊಂದಿರುವ “ಯಕ್ಷ ರಾಮ” ಬಿರುದು ಪಡೆದ ಸರಳ ಸಜ್ಜನಿಕೆಯ ಕಲಾವಿದರಾಗಿದ್ದಾರೆ. ಕಟೀಲು ಮೇಳದಲ್ಲಿ ಕಲಾ ಜೀವನ ಆರಂಭ ಮಾಡಿ ಒಂದೂವರೆ ದಶಕ ಸೇವೆ ಸಲ್ಲಿಸಿ, ಬಪ್ಪನಾಡು, ಸುಂಕದಕಟ್ಟೆ ಮೇಳಗಳಲ್ಲಿ ತಿರುಗಾಟ ಅನುಭವ ಪಡೆದವರು. ಪಟ್ಲ ಭಾಗವತರ ನೆಚ್ಚಿನ ಕಲಾವಿದನಾಗಿ ಬೆಳೆದು ಪಾವಂಜೆ ಮೇಳದಲ್ಲಿ ಕಲಾ ಯಾನ ಮುಂದುವರಿಸುತ್ತಿರುವ ಇವರು ಹಲವಾರು ಯಕ್ಷಗಾನ ಬಯಲಾಟ, ತಾಳಮದ್ದಳೆ, ಗಾನ -ನಾಟ್ಯ ವೈಭವಗಳನ್ನು ಸಂಯೋಜಿಸಿದ್ದಾರೆ. ನಿರೂಪಕರಾಗಿಯೂ ಜನಪ್ರಿಯತೆ ಗಳಿಸಿದ್ದಾರೆ. ಕದ್ರಿ ಕಂಬಳ ಗುತ್ತಿನ ಯಜಮಾನರಾಗಿ ಹಲವು ದಶಕ ಗಳ ಕಾಲ ಇತಿಹಾಸ ಪ್ರಸಿದ್ದ ಸಂಪ್ರದಾಯಿಕ ಕದ್ರಿ ಕಂಬಳವನ್ನು ಸಂಘಟಿಸಿದ್ದ ಹಿರಿಯ ಹವ್ಯಾಸಿ ಅರ್ಥಧಾರಿ ಸ್ವಗ್ಗೀðಯ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಅವರ ಸ್ಮರಣಾರ್ಥ ಪ್ರಶಸ್ತಿ ನೀಡಲಾಗುತ್ತಿದೆ. ನವೆಂಬರ್ 4 ರಂದು ಕದ್ರಿ ದೇವಸ್ಥಾನದಲ್ಲಿ ಪಾವಂಜೆ ಮೇಳದ ಸೇವೆ ಬಯಲಾಟ “ಛಾಯಾ ನಂದನ” ನೂತನ ಪ್ರಸಂಗ ಪ್ರದರ್ಶನ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕದ್ರಿ ಯಕ್ಷ ಬಳಗದ ಕದ್ರಿ ನವನೀತ ಶೆಟ್ಟಿ ಹಾಗೂ ಪ್ರದೀಪ್ ಆಳ್ವ ಕದ್ರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!