ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ, ಮೊಡಾಂಕಾಪುವಿನಲ್ಲಿರುವ ಸೆವೆನ್ ಸ್ಪೈಸಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ನಲ್ಲಿ ಸೆಲ್ಸ್ ಮ್ಯಾನ ಆಗಿ ಕೆಲಸ ಮಾಡುತ್ತಿದ್ದ ಚೆನ್ನಕೇಶವ ಅವರು, ಎಂದಿನಂತೆ ಮನೆಯಿಂದ ಹೋಗಿ ಅಲ್ಲಿಂದ ಮಸಾಲೆ ಪದಾರ್ಥಗಳನ್ನು ಲೈನ್ ಸೆಲ್ಸ ಬಗ್ಗೆ ವಾಹನದಲ್ಲಿ ಚಾಲಕ ಹರಿದಾಸ್ ರವರ ಜೊತೆಗೆ ಹೋಗಿ ಲೈನ್ ಕೆಲಸ ಮುಗಿಸಿ ಪಂಪುವೆಲ್ನಲ್ಲಿ ಇಳಿದು ಬೇರೆ ಕೆಲಸ ಮುಗಿಸಿ ಕಂಪೆನಿಗೆ ಬರುವುದಾಗಿ ತಿಳಿಸಿ ಹೋಗಿದ್ದಾರೆ. ನಂತರ ಚನ್ನಕೇಶವ ಅವರು ದೂರುದಾರ ಅತ್ತಿಗೆಗೆ ಕರೆ ಮಾಡಿ ತಾನು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದು, ಮೊಬೈಲ್ನಲ್ಲಿ ಚಾರ್ಜ್ ಇಲ್ಲದ ಕಾರಣ ಸ್ವಿಚ್ ಆಫ್ ಆಗುತ್ತದೆ. ನಾಲ್ಕು ದಿನ ಬಿಟ್ಟು ಕರೆ ಮಾಡುವುದಾಗಿ ತಿಳಿಸಿ ಈವರೆಗೆ ಕರೆ ಮಾಡಿರುವುದಿಲ್ಲ. ಚನ್ನಕೇಶವ ಸಂಬಂಧಿಕರ ಮನೆಗೂ, ಕಂಪೆನಿಯ ಕೆಲಸಕ್ಕೂ ಹಾಗೂ ಮನೆಗೆ ಬಾರದೆ ಕಾಣೆಯಾಗಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.



