ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನೇತ್ರಾವತಿ ನದಿಯ ಒಡಲ ಮೇಲೆ ನಿರಂತರ ದಾಳಿ; ಸಾಮಾಜಿಕ ಜಾಲತಾಣದಲ್ಲಿ ವೈರಲ್!!

ನೇತ್ರಾವತಿ ನದಿಯ ಒಡಲ ಮೇಲೆ ನಿರಂತರವಾಗಿ ದಾಳಿಯಾಗುತ್ತಲೇ ಇದ್ದು, ಬೇರೆ ಬೇರೆ ರೀತಿಯಲ್ಲಿ ಸವಾರಿಯಾಗುತ್ತಿರುವುದು ನಮ್ಮ ಕಣ್ಣಮುಂದಿದೆ.

ಇದೀಗ ಬಂಟ್ವಾಳ ತಾಲೂಕಿನ ಅಜಿಲಮೊಗರು ಎಂಬಲ್ಲಿ ನೇತ್ರಾವತಿ ನದಿಯನ್ನು ನುಂಗಲು ಹೊರಟಿರುವ ದೃಶ್ಯ ಒಂದು ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿದೆ. ಅಜಿಲಮೊಗರು ಮಸೀದಿಯ ಪಕ್ಕಕ್ಕೆ ನೇತ್ರಾವತಿ ನದಿಗೆ ಮಣ್ಣು ತುಂಬಿಸುವ ದೃಶ್ಯ ಕಂಡು ಬಂದಿದ್ದು, ನೀರು ಹರಿದುಹೋಗುವ ನದಿಗೆ ಮಣ್ಣು ಹಾಕಿ ಅಕ್ರಮವಾಗಿ ಜಾಗವನ್ನು ಅತಿಕ್ರಮಣ ಮಾಡಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈಗಾಗಲೇ ನೂರಾರು ಲೋಡ್ ಮಣ್ಣು ನೇತ್ರಾವತಿ ನದಿ ತುಂಬಿದ್ದು, ಇದು ಕಾನೂನು ಬಾಹಿರವಾಗಿದೆ. ಹಾಗಾಗಿ ಕೂಡಲೇ ಇದರ ಕ್ರಮ ಕೈಗೊಳ್ಳಲು ಸ್ಥಳೀಯರು ಅಧಿಕಾರಿಗಳ ಗಮನ ಹರಿಸಿದ್ದಾರೆ. ನೇತ್ರಾವತಿ ನದಿಯ ಒಡಲನ್ನು ಬಿಡದ ಆರೋಪಿಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!