ಮಂಗಳೂರು ಹೊರವಲಯದಲ್ಲಿ ಯುವಕನ ಮೇಲೆ ಮಾರಕಾಸ್ತ್ರದಿಂದ ದಾಳಿ ಮಾಡಿದ ಘಟನೆ ನಡೆದಿದೆ.

ಬಜಪೆ ಠಾಣಾ ವ್ಯಾಪ್ತಿಯಲ್ಲಿ ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಮೇಲೆ ದಾಳಿ ಮಾಡಲಾಗಿದೆ, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಬಂದರಿನ ರೌಡಿ ಶೀಟರ್ ಸಿನಾನ್, ವೇಣೂರಿನ ಇರ್ಷಾದ್, ಅಕ್ರಮ್, ಸಾದಿಕ್ ಬಂಧಿತ ಆರೋಪಿಗಳು.

ಇವರು ಬೈಕ್ನಲ್ಲಿ ಮಾರಕಾಸ್ತ್ರ ಹಿಡಿದು ಸಾಗುತ್ತಿದ್ದ ಬಗ್ಗೆ ಮೊಬೈಲ್ನಲ್ಲಿ ಅಖಿಲೇಶ್ ವಿಡಿಯೋ ಮಾಡಿದ್ದಾರೆ. ಇನ್ನೊಂದು ಮೂಲದ ಪ್ರಕಾರ ಬೈಕಿನಲ್ಲಿ ಮಾರಕಾಸ್ತ್ರ ಹಿಡಿದು ಸಾಗುತ್ತಿದ್ದಾಗ ನಶೆಯ ಅಮಲಿನಲ್ಲಿದ್ದವರು ತಮ್ಮ ವಾಹನವನ್ನು ಓವರ್ ಟೇಕ್ ಮಾಡಿದ್ದ ಕಾರಣಕ್ಕೆ ಅಖಿಲೇಶ್ ಮೇಲೆ ಹಲ್ಲೆ ಮಾಡಿ ಆತನ ಮೇಲೆ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಅಖಿಲೇಶ್ ಮೂಡಬಿದ್ರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬಜಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



