ಪುತ್ತೂರು: ಆರ್ಯಪುವಿನಲ್ಲಿ ಜಯಭೇರಿ ಗಳಿಸಿದ್ದ ಪುತ್ತಿಲ ಪರಿವಾರ ವಿಜಯೋತ್ಸವ ಕೈಗೊಂಡಿತ್ತು. ಆದರೆ ಅನುಮತಿ ಇಲ್ಲದೇ ಸಂಭ್ರಮಾಚರಣೆ ನಡೆಸಿದ ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಭಂಗ ಪ್ರಕರಣ ದಾಖಲಾಗಿದೆ.
ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರದ ಗೆಲುವಿನ ಹಿನ್ನಲೆಯಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ಮಿನಿ ವಿಧಾನಸೌಧದಿಂದ ಮುಕ್ರಂಪಾಡಿವರೆಗೆ ಡಿಜೆ ಬಳಸಿ ವಿಜಯೋತ್ಸವ ನಡೆಸಿದರು. ಇದೀಗ ಸಾರ್ವಜನಿಕ ಶಾಂತಿ ಕದಡಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ.



