ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ದನ ಕಳ್ಳತನ ; ನಾಲ್ಕು ದಿನ ಕಳೆದರು ಗೋವು ಪತ್ತೆಯಾಗಿಲ್ಲ….!

ವಿಟ್ಲ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ವತಿಯಿಂದ ಭೇಟಿ ಮಾಡಿ ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಪೋಲಿಸ್ ಇಲಾಖೆಗೆ ಮನವಿ ಮಾಡಲಾಗಿದೆ.

ಕೇರಳ ಗಡಿ ಪ್ರದೇಶವಾಗಿರುವ ವಿಟ್ಲದ ಪೆರುವಾಯಿ ಗ್ರಾಮದ ಅಶ್ವಥನಗರ ಬಳಿಯಿರುವ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ನಾಲ್ಕು ಗೋವುಗಳ ಕಳ್ಳತನವಾಗಿ ಇಂದಿಗೆ ಆರು ದಿನವಾಗಿದ್ದು, ಎಫ್.ಐ.ಆರ್ ದಾಖಲಿಸಿ ಇಂದಿಗೆ ನಾಲ್ಕು ದಿನ ಕಳೆದರು ಇಂದಿಗೂ ಗೋವು ಪತ್ತೆಯಾಗಿಲ್ಲ ಈ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆಯ ವತಿಯಿಂದ ಗೋವು ಕಳೆದುಕೊಂಡ ಪೆರುವಾಯಿಯ ಗಣೇಶ್ ಎಂಬವರ ಮನೆಗೆ ಭೇಟಿ ಮಾಡಿ ಘಟನೆ ಬಗ್ಗೆ ವಿಚಾರಿಸಿ ನಂತರ ವಿಟ್ಲ ಪೋಲಿಸ್ ಠಾಣೆಗೆ ತೆರಳಿ ತನಿಖೆಯ ಪ್ರಗತಿ ಬಗ್ಗೆ ಪೋಲಿಸ್ ಅಧಿಕಾರಿಗಳಲ್ಲಿ ಮಾಹಿತಿ ಪಡೆದುಕೊಂಡು ಶೀಘ್ರವಾಗಿ ಗೋಕಳ್ಳ ಆರೋಪಿಗಳನ್ನು ಪತ್ತೆ ಹಚ್ಚಬೇಕು ಹಾಗೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಮನವಿ ಮಾಡಲಾಗಿದೆ. ಇನ್ನೂ ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!