ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ 54ರ ಉಳ್ಳಾಲ ಹೊಯಿಗೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಕಾಲುದಾರಿಯ ಮೂಲಕ ಸಾರ್ವಜನಿಕರು ಸಂಚರಿಸಲು ಬಳಸುತ್ತಿದ್ದ ಲೋಹದ ಕಾಲುಸಂಕ 4 ವರ್ಷಗಳ ಹಿಂದೆ ಕುಸಿದು ಬಿದ್ದಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ದೋಣಿಯಲ್ಲಿ ಸಂಚರಿಸಿ ಸ್ದಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಅವರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಅವರೊಂದಿಗೆ ಬುಧವಾರ ದೋಣಿಯಲ್ಲಿಯೇ ಕಾಲುಸಂಕ ಇದ್ದ ಸ್ಥಳಕ್ಕೆ ತೆರಳಿ ಸಮಗ್ರವಾಗಿ ಪರಿಶೀಲಿಸಿದರು. ಕಾಲುಸಂಕದ ಪುನರ್ ನಿರ್ಮಾಣ ಅಥವಾ ದುರಸ್ತಿಯ ಬಗ್ಗೆ ತಾಂತ್ರಿಕ ಅಭಿಪ್ರಾಯ ಪಡೆದು ಶೀಘ್ರದಲ್ಲಿ ತೀರ್ಮಾನವೊಂದನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.



