ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬಂಟ್ವಾಳ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದ ರಮಾನಂದ; ಆತ್ಮಹತ್ಯೆ ಅಲ್ಲ ಇದು ಕೊಲೆ..!

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದ ರಮಾನಂದ ಅವರದ್ದು ಆತ್ಮಹತ್ಯೆ ಅಲ್ಲ, ಇದೊಂದು ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ ಸಂಶಯವಿದ್ದು, ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿ ಅವರು ವಾಮಂಜರೂರು ಪೋಲೀಸ್ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ.

ಬರಿಮಾರು ಗ್ರಾಮದ ದೇಲಬೆಟ್ಟು ನಿವಾಸಿ ರಮಾನಂದ ಎಂಬಾತ ನ.25 ರಂದು ನಾಪತ್ತೆಯಾಗಿದ್ದ, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ಕೂಡ ದಾಖಲಾಗಿತ್ತು. ಈ ಮಧ್ಯೆ ಅದೇ ದಿನ ಮಧ್ಯಾಹ್ನದ ವೇಳೆ ಈತನ ಮೃತದೇಹ ಮಂಗಳೂರು ತಾಲೂಕಿನ ವಾಮಂಜೂರು ಕೆತ್ತಿಕಲ್ಲು ಎಂಬಲ್ಲಿ ಪತ್ತೆಯಾಗಿದೆ. ರಮಾನಂದ ಅವರ ಮೃತದೇಹ ಕೆತ್ತಿಕಲ್ಲುವಿನ ಗುಡ್ಡದಲ್ಲಿ ಮರದ ಕೆಳಗೆ ಬಿದ್ದ ಸ್ಥಿತಿಯಲ್ಲಿ ಇತ್ತು, ಮೇಲ್ನೋಟಕ್ಕೆ ಈತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಹಗ್ಗ ತುಂಡಾಗಿ ಕೆಳಗೆ ಬಿದ್ದಂತೆ ಕಾಣಿಸಿಕೊಂಡಿದ್ದು, ವಾಮಂಜರೂ ಪೋಲೀಸ್ ಠಾಣೆಯಲ್ಲಿ ಈ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು.

ಆದರೆ ಮನೆಯವರಿಗೆ ಈತನ ಸಾವಿನ ಬಗ್ಗೆ ಸಂಶಯವಿದ್ದು, ಇದೊಂದು ವ್ಯವಸ್ಥಿತ ರೀತಿಯ ಕೊಲೆಯಾಗಿರಬಹುದು ಎಂಬ ಸಂಶಯ ವ್ಯಕ್ತವಾಗಿದ್ದು, ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡುವಂತೆ ಇದೀಗ ತಾಯಿ ಠಾಣೆಯ ಮೆಟ್ಟಿಲು ಏರಿದ್ದಾರೆ. ರಮಾನಂದ ಅವರಿಗೆ ಕಳೆದ ಮೂರು ವರ್ಷಗಳಿಂದ ವಾಮಂಜೂರು ಭಾಗದ ಹುಡುಗಿ ಜೊತೆ ಪ್ರೀತಿ ಇತ್ತು, ಕೆಲ ದಿನಗಳಿಂದ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯ ಬಂದಿದ್ದು, ಆಕೆಯ ಕುಟುಂಬಿಕರು ಈತನಿಗೆ ಬೆದರಿಕೆ ಹಾಕಿದ್ದಾರೆ ಎಂಬ ದೂರು ಮನೆಯವರದ್ದು. ಹಾಗಾಗಿ ಹುಡುಗಿಯ ಜೊತೆ ಮನೆಯವರು ಸೇರಿ ಈತನನ್ನು ಕೊಲೆ ಮಾಡಿದ್ದಾರೆ ಎಂಬ ದೂರನ್ನು ತಾಯಿ ಜಾನಕಿ ಅವರು ನೀಡಿದ್ದು, ನ್ಯಾಯಕ್ಕಾಗಿ ಪೋಲೀಸ್ ಮೊರೆ ಹೋಗಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!