ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬೈಂದೂರಿನ ತಾರಾಪತಿ ಶಾಲೆಯ ಮೇಲ್ಛಾವಣಿ ಕುಸಿತ, ರಜೆಯಲ್ಲಿ ತಪ್ಪಿದ ಭಾರೀ ಅನಾಹುತ

ಉಡುಪಿ ಜಿಲ್ಲೆಯಾದ್ಯಂತ ಸತತ ಮಳೆಯಾಗುತ್ತಿದ್ದು, ಬೈಂದೂರು ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಡುವರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಾಪತಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಶಾಲೆಗೆ ರಜೆ ಇದ್ದ ಕಾರಣ ಯಾವುದೇ ತೊಂದರೆಯಾಗಿಲ್ಲ. ಇಲ್ಲಿಯ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ತೆರವುಗೊಳಿಸಬೇಕೆಂದು ಇಂಜಿನಿಯರ್ ವರದಿ ನೀಡಿದ್ದರೂ ಸಹ ಅಧಿಕಾರಿಗಳು ಗಮನ ಹರಿಸಿರಲಿಲ್ಲ. ಕೆಲವು ಸಮಯದ ಹಿಂದೆ ಈ ಕಟ್ಟಡದಲ್ಲಿ ತರಗತಿ ನಡೆಯುತ್ತಿತ್ತು. ಅಪಾಯ ಅರಿತ ಸ್ಥಳೀಯರು ಈ ಕಟ್ಟಡದಲ್ಲಿ ತರಗತಿ ನಡೆಸದಂತೆ ಶಿಕ್ಷಕರಿಗೆ ತಿಳಿಸಿದ್ದರು. ಇದೀಗ ಅಧಿಕಾರಿಗಳ ನಿರ್ಲಕ್ಷದಿಂದ ಇಂತಹ ಘಟನೆಗಳು ಸಂಭವಿಸುತ್ತಿರುವುದು ಪಾಲಕರ ಆತಂಕಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ರೈಲಿನಲ್ಲಿ ಹೆರಿಗೆ ; ಬೋಗಿಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ…!

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 4ನೇ ತಿರುವಿನಲ್ಲಿ ಭೀಕರ ಬಸ್ ಅಪ*ಘಾತ…!

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ..!

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ಬಂಟ್ವಾಳ: ಗಡಿಯಾರ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು….!

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

100 ಶೇಕಡಾ ಫಲಿತಾಂಶ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ..!

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ…!

ಬಂಟ್ವಾಳ: ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಮೃ*ತ್ಯು..!

error: Content is protected !!