ಜನ ಮನದ ನಾಡಿ ಮಿಡಿತ

Advertisement

ಬೆಳಗಾವಿ: ಕಲ್ಲು, ಡಾಂಬರ್, ಸಿಮೆಂಟ್ ಗೆ ಬೆಲೆಯಿದೆ ಆದರೆ ಆರೋಗ್ಯಕ್ಕೆ ಬೆಲೆ ಇಲ್ಲವೇ -ಡಾ. ಧನಂಜಯ ಸರ್ಜಿ

ಕಲ್ಲು, ಡಾಂಬರ್, ಸಿಮೆಂಟ್ ಗೆ ಬೆಲೆಯಿದೆ ಆದರೆ ಆರೋಗ್ಯಕ್ಕೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ವಿವಿಧ ಆರೋಗ್ಯ ಯೋಜನೆಗಳ ಎಂಪ್ಯಾನೆಲ್ ಆಸ್ಪತ್ರೆಗಳಲ್ಲಿ ವಿವಿಧ ಚಿಕಿತ್ಸೆಗಳಿಗೆ ಸಿ.ಜಿ.ಎಚ್.ಎಸ್ ದರಗಳನ್ನು ಸರಿಯಾಗಿ ಪರಿಷ್ಕರಿಸದೇ ಇರುವುದರಿಂದ ತೊಂದರೆಯಾಗಿದೆ. ಪರಿಷ್ಕರಣೆ ಮಾಡದಿರಲು ಕಾರಣವೇನು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಡಾ.ಧನಂಜಯ ಸರ್ಜಿ ಪ್ರಶ್ನಿಸಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು ಸಿ.ಜಿ.ಎಚ್.ಎಸ್ ದರ ಪರಿಸ್ಕರಣೆಯಾಗಿ ಸಿಸೇರಿಯನ್ ಹೆರಿಗೆಗೆ 38,040, ನಾರ್ಮಲ್ ಹೆರಿಗೆಗೆ 26, 775 ನಿಗದಿಯಾಗಿದ್ದರೆ. ರಾಜ್ಯದ ಯಶಸ್ವಿನಿ ಯೋಜನೆ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಕೇವಲ 13,000 ದಿಂದ 14,000 ಮಾತ್ರ ಇದೆ, ನಿಗದಿ ದರಕ್ಕಿಂತ ಮೂರೂ ಪಟ್ಟು ಕಡಿಮೆ ಇದೆ. ಆಂಜಿಯೋಪ್ಲಾಸ್ಟಿಗೆ ಪರಿಷ್ಕೃತ ದರ ಸ್ಟಂಟ್ ಇಲ್ಲದೆ 74,205 ರೂ. ಇದೆ, ಚಿಕಿತ್ಸೆಯಲ್ಲಿ ಸ್ಟಂಟ್ ಸೇರಿದರೆ 1 ಲಕ್ಷ ರೂ. ಆಗುತ್ತದೆ. ಆದರೆ ಬೇರೆ ಯೋಜನೆಯಡಿ 60,000 ಇದೆ. ಹೃದಯ ಬೈ ಪಾಸ್ ಸರ್ಜರಿಗೆ 1 ಲಕ್ಷದ 80 ಸಾವಿರ ಇದ್ದರೆ ಯಶಸ್ವಿನಿ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಸಿ.ಜಿ.ಎಚ್.ಎಸ್ ದರ 1 ಲಕ್ಷ ರೂ ಗಳನ್ನು ರಾಜ್ಯ ಸರ್ಕಾರ ನಿಗದಿಪಡಿಸಿದೆ. ಇದರಿಂದ ಚಿಕಿತ್ಸೆ ಕೊಡುವ ಆಸ್ಪತ್ರೆಗಳಿಗೆ ಅನ್ಯಾಯವಾಗುತ್ತದೆ. ಕಲ್ಲು ಡಾಂಬರ್, ಸಿಮೆಂಟ್ ಕುಡಿಯುವ ನೀರಿನ ಘಟಕ, ಕಂಪ್ಯೂಟರ್ ಪ್ರತಿಯೊಂದು ವಸ್ತುವನ್ನು ಕೊಳ್ಳಬೇಕಾದರೆ ಅದಕ್ಕೆ ಎಸ್.ಆರ್ ಬೆಲೆ ಇರುತ್ತದೆ, ಆರೋಗ್ಯಕ್ಕೆ ಯಾಕೆ ಎಸ್.ಆರ್ ಬೆಲೆ ಇಲ್ಲ ಎಂದು ಪ್ರಶ್ನಿಸಿದರು. ಮುಂದುವರೆದು ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆ ರಾಜ್ಯ ಸರ್ಕಾರ ಆರೋಗ್ಯ ಯೋಜನೆಗಳಿಗೆ ಪರಿಷ್ಕೃತ ದರದ ಪ್ರಕಾರ ಸಿ.ಜಿ.ಎಚ್.ಎಸ್ ದರವನ್ನು ನಿಗದಿ ಮಾಡಬೇಕು, ಯಶಸ್ವಿನಿ ಯೋಜನೆಗೆ ರಾಜ್ಯ ಸರ್ಕಾರದಿಂದ 60 ರಿಂದ 70 ಕೋಟಿ ಅನುದಾನ ಬಂದರೇ ಯಶಸ್ವಿನಿ ಫಲಾನುಭವಿಗಳಿಗೆ ಉಪಯೋಗವಾಗುತ್ತದೆ, ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮತ್ತು ಆರೋಗ್ಯ ಸಚಿವರಿಗೂ ಮನವಿ ಬಂದಿದೆ. ಸಾರಿಗೆ ಇಲಾಖೆಗಳಿಗೆ ಮತ್ತು 70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಕೊಡಬೇಕು ಎಂದು ಕೇಂದ್ರ ಸರ್ಕಾರದಿಂದ ಪ್ರಸ್ತಾವನೆ ಬಂದಿದೆ ಆದರೆ ರಾಜ್ಯ ಸರ್ಕಾರಿಂದ 70 ವರ್ಷ ಮೇಲ್ಪಟ್ಟವರಿಗೆ ಈ ಯೋಜನೆ ಜಾರಿ ಆಗಿಲ್ಲ ಎಂದವರು ಯೋಜನೆಯ ಕುಂದುಕೊರತೆಗಳತ್ತ ಗಮನ ಸೆಳೆದರು. ಇದಕ್ಕೆ ಉತ್ತರಿಸಿದ ಸಚಿವರು ನಮ್ಮ ಸರ್ಕಾರವು ಕೂಡ ಗೃಹ ಇಲಾಖೆ, ಕಾರ್ಮಿಕ ಇಲಾಖೆಗಳಲ್ಲಿ ಮತ್ತು ಸರ್ಕಾರಿ ನೌಕರರಿಗೂ ಸಿ.ಜಿ.ಎಚ್.ಎಸ್ ದರವನ್ನು ಅಳವಡಿಸಿಕೊಂಡಿದೆ, ಯಶಸ್ವಿನಿ ಯೋಜನೆಗೆ ಸಹಕಾರ ಇಲಾಖೆ ಅನುಮೋದನೆ ನೀಡಬೇಕು, ಮತ್ತು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ನಾವು ಸಿ.ಜಿ.ಎಚ್.ಎಸ್ ದರದ ಬದಲು ಹೆಚ್.ಬಿ.ಪಿ (ಹೆಲ್ತ್ ಬೆನಿಫಿಟ್ ಪ್ಯಾಕೇಜ್ ) ದರದ ಪ್ರಕಾರ 2014ರ ನಿಗದಿಯಂತೆ ನೀಡುತಿದ್ದೇವೆ. ಹೆಚ್ಚಿನ ದರವನ್ನು ನೀಡಲು ಹಣದ ಕೊರತೆ ಇದೆ ಹೆಚ್.ಬಿ.ಪಿ (ಹೆಲ್ತ್ ಬೆನಿಫಿಟ್ ಪ್ಯಾಕೇಜ್) ದರವನ್ನು 2022 ರ ದರಕ್ಕೆ ತೆಗೆದುಕೊಂಡು ಬರಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!