ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ರೋಟರಿ ಕ್ಲಬ್‌ನ ವಲಯ 4ರ ಮಾಜಿ ಸಹಾಯಕ ಗವರ್ನರ್ ನಿಧನ

ರೋಟರಿ ಕ್ಲಬ್‌ನ ವಲಯ 4ರ ಮಾಜಿ ಸಹಾಯಕ ಗವರ್ನರ್, ಜಿಲ್ಲಾ ಕಾರ್ಯದರ್ಶಿ ಹಾಗೂ ಬಂಟ್ವಾಳ ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾಗಿದ್ದ ವಿಜಯಾ ಬ್ಯಾಂಕ್ ನ ನಿವೃತ್ತ ಸಿಬ್ಬಂದಿ ಎಂ.ರಾಮಣ್ಣ ರೈ ಅಲ್ಪಕಾಲದ ಅಸೌಖ್ಯದಿಂದ ಬಂಟ್ವಾಳ ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಪತ್ನಿ, ಇಬ್ಬರು ಪುತ್ರಿಯರನ್ನು ಹೊಂದಿದ್ದು, ಮೂಲತಃ ಅಂಬಾಬೀಡು ಮನೆಯವರಾಗಿದ್ದರು. ಪ್ರಸ್ತುತ ಮಾವಂತೂರುಗುತ್ತಿನಲ್ಲಿ ನೆಲೆಸಿದ್ದ ಅವರು, ಬಂಟ್ವಾಳ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾಗಿ, ವಲಯ ನಾಲ್ಕರ ಸಹಾಯಕ ಗವರ್ನರ್, 2023ರಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ರೋಟರಿ ಕ್ಲಬ್‌ನಲ್ಲಿ ಸುಮಾರು ನಲ್ವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ವಿಜಯಾ ಬ್ಯಾಂಕ್‌ನಲ್ಲಿ ಸುದೀರ್ಘ ಅವಧಿಯಲ್ಲಿ ವಿವಿಧ ಶಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರು ಬಂಟರ ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದು, ಬಂಟ್ವಾಳ ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು. ಸಾಮಾಜಿಕವಾಗಿ ಹಲವು ಸಂಘ, ಸಂಸ್ಥೆಗಳಲ್ಲಿ ರಾಮಣ್ಣ ರೈ ಅವರು ಸಕ್ರಿಯರಾಗಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!