ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಚಾಲಕ ಸ್ಥಳದಲ್ಲೇ ಮೃ*ತ್ಯು..!

ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರೊಂದು ರಸ್ತೆ ಬದಿಯ ಮರಕ್ಕೆ ಢಿ*ಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಸಂಭವಿಸಿದೆ.

ಮೃತರನ್ನು ಟಿಪ್ಪರ್ ಚಾಲಕ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ನಿಟ್ಟೂರಿನ ರಂಜನ್ ಶೆಟ್ಟಿ ಎಂಬವರ ಮಾಲಕತ್ವದ ಟಿಪ್ಪರ್‌ನ್ನು ಚಾಲಕ ಶ್ರೀಕಾಂತ್, ನಿಟ್ಟೂರಿನಿಂದ ಜೆಲ್ಲಿ ಲೋಡ್‌ಗಾಗಿ ಚಲಾಯಿಸಿಕೊಂಡು ಹೋಗಿದ್ದರು. ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಹೋಗುತ್ತಿದ್ದ ಟಿಪ್ಪರ್, ರಸ್ತೆಯ ತಿರುವಿನಲ್ಲಿರುವ ರಸ್ತೆ ಹೊಂಡಕ್ಕೆ ಬಿದ್ದಿದ್ದು, ಇದರಿಂದ ನಿಯಂತ್ರಣ ತಪ್ಪಿದ ಟಿಪ್ಪರ್, ರಸ್ತೆಯ ಬಲ ಬದಿಯ ದೊಡ್ಡ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕನ ಸೀಟ್‌ನಲ್ಲಿ ಶ್ರೀಕಾಂತ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!