ವಿದ್ಯಾರ್ಥಿಯೊಬ್ಬ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ.

ಕೇರಳ ಮೂಲದ ಜಗನ್ ಮೋಹನ್ (25) ಮೃ*ತ ವಿದ್ಯಾರ್ಥಿಯಾಗಿದ್ದಾನೆ. ಮೋಹನ್ ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜು ಸಮೀಪದಲ್ಲಿರುವ ಶಾಂತಿನಗರದಲ್ಲಿ ರೂಂ ಬಾಡಿಗೆ ಪಡೆದು ವಾಸವಿದ್ದ ಮೋಹನ್ ಡೆ*ತ್ ನೋಟ್ ಬರೆದಿಟ್ಟು ನೇ*ಣು ಬಿಗಿದುಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ ಮೋಹನ್ ಮೂರು ನಂಬರ್ ಬರೆದಿದ್ದಾನೆ. ಪರಿಶೀಲನೆ ನಡೆಸಿದಾಗ ಫೇಕ್ ವೀಡಿಯೋ ಕಾಲ್ನಲ್ಲಿ ಹಣ ಕಳೆದುಕೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, 25,000 ರೂ. ವರ್ಗಾವಣೆ ಮಾಡಿರುವುದು ಗೊತ್ತಾಗಿದೆ. ಬೆತ್ತಲೆ ಫೋಟೋ ಹಾಗೂ ವೀಡಿಯೋ ವೈರಲ್ ಮಾಡುವುದಾಗಿ ಬೆ*ದರಿಕೆ ಹಾಕಿದ್ದಕ್ಕೆ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸೋಲದೇವನಹಳ್ಳಿ ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮ*ರಣೋತ್ತರ ಪರೀಕ್ಷೆ ನಡೆಸಿ, ಮೃ*ತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.



