ಬೈಕ್ಗೆ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ(ಡಿ.17) ರಾತ್ರಿ ನಡೆದಿದೆ.

ರಾಜಾ ಹುಸೇನ್(18), ಅಸೀಫ್(19), ಮತ್ತು ವಾಜಿದ್(19) ಮೃತಪಟ್ಟ ಯುವಕರು. ಶ್ರೀರಾಮನಗರದಿಂದ ಹೊಸಹಳ್ಳಿಗೆ ಮೂವರು ಯುವಕರು ಬೈಕ್ನಲ್ಲಿ ಹೋಗುತ್ತಿರುವಾಗ ಇಂದರಗಿ ಗ್ರಾಮದ ಸಮೀಪ ಬೊಲೆರೋ ವಾಹನ ಡಿಕ್ಕಿಯಾಗಿದ್ದು ಬೊಲೆರೋವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಅಪಘಾತದ ಸಂಭವಿಸಿದ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.



