ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಮುದರಂಗಡಿ ಪೇಟೆಯ ಸಮೀಪ ಸಂಭವಿಸಿದೆ.

ಮುದರಂಗಡಿ ಅಗರ್ ದಂಡೆ ನಿವಾಸಿ ಜಸ್ಟಿನ್ ಡಿಸೋಜ ಮೃತಪಟ್ಟ ದುರ್ದೈವಿ. ಜಸ್ಟಿನ್ ಅವರು ತಡರಾತ್ರಿವರೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಸ್ ಮನೆಗೆ ಮರಳುತ್ತಿದ್ದಾಗ, ಮುದರಂಗಡಿ ಪೇಟೆ ಸಮೀಪದ ರಸ್ತೆ ಪಕ್ಕದಲ್ಲಿದ್ದ ಡಿವೈಡರ್ಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜಸ್ಟಿನ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿದೆ. ಆದರೆ ದಾರಿ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.



