ಅಬ್ದುಲ್ ಸತ್ತಾರ್ ಮುಲ್ಲರಪಟ್ನ ಎಂಬ ವ್ಯಕ್ತಿ ತನ್ನ 11 ವರ್ಷದ ಮಗಳೊಂದಿಗೆ ಸುಮಾರು 19 ಕೆಜಿ ಗೋಮಾಂಸವನ್ನು ಯಾವುದೇ ದಾಖಲೆಗಳಿಲ್ಲದೆ ಹೋಗುತ್ತಿದ್ದ ಸಂದರ್ಭದಲ್ಲಿ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮಳಲಿ ನಾರ್ಲಪದವಿ ರಸ್ತೆಯಲ್ಲಿ ಇಬ್ಬರು ಯುವಕರು ಬಂದು ತಡೆದ ಘಟನೆ ನಡೆದಿದೆ.

ಈ ಸಂದರ್ಭ ಸೈಲೆನ್ಸರ್ ತಗುಲಿ ಬಾಲಕಿಯ ಕಾಲು ಸುಟ್ಟುಹೋದ ಘಟನೆ ನಡೆದಿದೆ. ಯುವಕರನ್ನು ಯೆಡಪದವಿನ ನಿವಾಸಿಗಳಾದ ಸುಮಿತ್ ಭಂಡಾರಿ ಮತ್ತು ರಜತ್ ನಾಯಕ್ ಎಂದು ಗುರುತಿಸಲಾಗಿದೆ. ಸತ್ತಾರ್ ಬೈಕ್ ಬಿಟ್ಟು ಓಡಿಹೋಗಿದ್ದು ಸ್ಥಳೀಯರು ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಅಕ್ರಮ ಗೋಮಾಂಸ ಸಾಗಣೆ ಮಾಡಿದಕ್ಕೆ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ.



