ಜನ ಮನದ ನಾಡಿ ಮಿಡಿತ

Advertisement

ಕುಮಾರಧಾರ ನದಿಯಲ್ಲಿ ತೇಲಿ ಹೋದ ಮೃತದೇಹ

ಉಪ್ಪಿನಂಗಡಿ: ಮೃತದೇಹವೊಂದು ತೇಲಿ ಹೋದ ಬಗ್ಗೆ ಸುದ್ದಿ ಹರಡಿದ್ದು, ಗೃಹ ರಕ್ಷಕದಳದವರನ್ನೊಳಗೊಂಡ ಪ್ರಾಕೃತಿಕ ವಿಕೋಪ ರಕ್ಷಣಾ ತಂಡದ ಸದಸ್ಯರು ನದಿಯಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಮೃತದೇಹ ಪತ್ತೆಯಾಗದೇ ಅವರು ವಾಪಸ್ ಮರಳಿದ ಘಟನೆ ಜು.27ರಂದು ಸಂಜೆ ನಡೆದಿದೆ. ದೇವಾಲಯದ ಹಿಂಬದಿಯಲ್ಲಿರುವ ಕುಮಾರಧಾರ ನದಿಯಲ್ಲಿ ಮೃತದೇಹವೊಂದು ತೇಲಿ ಹೋಗುತ್ತಿರುವುದನ್ನು ಸಾರ್ವಜನಿಕರು ಕಂಡಿದ್ದು, ಕೂಡಲೇ ಅಲ್ಲೇ ಸಮೀಪದಲ್ಲೇ ಇರುವ ಪ್ರಾಕೃತಿಕ ವಿಕೋಪ ರಕ್ಷಣಾ ತಂಡದವರಿಗೆ ವಿಷಯ ಮುಟ್ಟಿಸಿದರು.

ಸಾರ್ವಜನಿಕರು ನೀಡಿದ ಮಾಹಿತಿಯನ್ನಧಾರಿಸಿ ತಕ್ಷಣವೇ ಕಾರ್ಯಪ್ರವೃತರಾದ ಪ್ರಾಕೃತಿಕ ವಿಕೋಪ ರಕ್ಷಣಾ ತಂಡದ ಸದಸ್ಯರು ತಮ್ಮಲ್ಲಿರುವ ರಬ್ಬರ್ ಬೋಟಿನಲ್ಲಿ ನದಿಯಲ್ಲಿ ಸುಮಾರು ನಾಲ್ಕು ಕಿಲೋಮೀಟರ್ ತನಕ ಹೋಗಿ ಹುಡುಕಾಟ ನಡೆಸಿದರೂ ಅವರಿಗೆ ಮೃತದೇಹ ಪತ್ತೆಯಾಗದ್ದರಿಂದ ಮತ್ತೆ ವಾಪಸ್ ಮರಳಿದರು.

ಆ ಬಳಿಕ ಈ ವಿಷಯ ಚರ್ಚೆಗೆ ಆಸ್ಪದ ನೀಡಿದ್ದು, ಕೆಲವರು ಕುಮಾರಧಾರ ಸೇತುವೆಯಿಂದ ಯಾರಾದರೂ ಹಾರಿರಬಹುದು ಎಂದರೆ, ಇನ್ನು ಕೆಲವರು ಎಲ್ಲೋ ನೀರಿಗೆ ಬಿದ್ದವರ ಮೃತದೇಹವಾಗಿರಬಹುದೆಂದು ಶಂಕಿಸುತ್ತಿದ್ದಾರೆ. ನದಿಯಲ್ಲಿ ಮೃತದೇಹ ತೇಲುತ್ತಿದೆ ಎಂದು ಹೇಳಿದ ಸಾರ್ವಜನಿಕರು ಬೇರೇನ್ನನ್ನೋ ಮೃತದೇಹವೆಂದು ಭ್ರಮಿಸಿದ್ದಾರೋ ಎಂಬ ಸಂಶಯನೂ ಇಲ್ಲಿ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ., ಉಪ್ಪಿನಂಗಡಿ ಕಂದಾಯ ಹೋಬಳಿಯ ಉಪತಹಶೀಲ್ದಾರ್ ಚೆನ್ನಪ್ಪ ಗೌಡ, ತಂಡದಲ್ಲಿ ಗ್ರಾಮ ಸಹಾಯಕ ಯತೀಶ್ ಮಡಿವಾಳ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.ಹುಡುಕಾಟದ ಗೃಹರಕ್ಷಕದಳದ ಪ್ರಭಾರ ಘಟಕಾಧಿಕಾರಿ ದಿನೇಶ್, ಎಎಸ್ಎಲ್ ಜನಾರ್ದನ ಆಚಾರ್ಯ, ಅಣ್ಣು, ಡೀಕಯ್ಯ ಇದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ರೈಲಿನಲ್ಲಿ ಹೆರಿಗೆ ; ಬೋಗಿಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ…!

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 4ನೇ ತಿರುವಿನಲ್ಲಿ ಭೀಕರ ಬಸ್ ಅಪ*ಘಾತ…!

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ..!

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ಬಂಟ್ವಾಳ: ಗಡಿಯಾರ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು….!

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

100 ಶೇಕಡಾ ಫಲಿತಾಂಶ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ..!

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ…!

ಬಂಟ್ವಾಳ: ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಮೃ*ತ್ಯು..!

error: Content is protected !!