ಜನ ಮನದ ನಾಡಿ ಮಿಡಿತ

Advertisement

ಪೈನಾಪಲ್ ತೋಟ ಹಾಗೂ ಗಿಡ ಮರಗಳು ಬೆಂಕಿಗಾಹುತಿ…!

 

ಉಡುಪಿ : ಪೈನಾಪಲ್ ತೋಟ ಹಾಗೂ ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆ ಬ್ರಹ್ಮಾವರ ತಾಲೂಕಿನ ನೀಲಾವರದಲ್ಲಿ ಸಂಭವಿಸಿದೆ.

ಮಟಪಾಡಿ ಗ್ರಾಮದಿಂದ ನೀಲಾವರ ಕಡೆ ಹೋಗುವ ಮಾರ್ಗದ ಅಕ್ಕ ಪಕ್ಕದ ರಸ್ತೆಗಳಲ್ಲಿ ಬೆಂಕಿ ಅಬ್ಬರ ಜೋರಾಗಿತ್ತು. ಜೆನಿತ್ ಡೈ ಮೇಕರ್ ಇಂಡಸ್ಟ್ರಿ ಸಮೀಪದ ರಸ್ತೆಯ ಅಕ್ಕಪಕ್ಕಗಳಲ್ಲಿ ಬೆಂಕಿ ಕಾಣಿಸಿಕೊಂಡು, ನಂತರ ಹಬ್ಬಲಾರಂಭಿಸಿದೆ. ಪರಿಸರದಲ್ಲಿದ್ದ ಪೈನಾಪಲ್ ತೋಟ ಹಾಗೂ ಒಣಹುಲ್ಲು, ಗಿಡ ಗಂಟಿಗಳು ಸುಟ್ಟು ಕರಕಲಾಗಿವೆ. ಪರಿಸರದ ಅಡಿಕೆ ತೋಟ, ತೆಂಗು, ಹಲಸು ಗಿಡಗಳು ಕೂಡ ಸುಟ್ಟು ಹೋಗಿವೆ . ಪರಿಸರದಲ್ಲಿ ಸಣ್ಣಪುಟ್ಟ ಕೈಗಾರಿಕೆಗಳಿದ್ದು ಸಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳೀಯರು ಮತ್ತು ಅಗ್ನಿಶಾಮಕದಳದ ಕಾರ್ಯಾಚರಣೆಯಿಂದ ಅನಾಹುತ ತಪ್ಪಿದೆ. ಇತ್ತೀಚಿನ ದಿನಗಳಲ್ಲಿ ಬ್ರಹ್ಮಾವರ ಪರಿಸರದಲ್ಲಿ ಪದೇ ಪದೇ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು ತಾಲೂಕು ಕೇಂದ್ರದಲ್ಲಿ ಶಾಶ್ವತ ಅಗ್ನಿಶಾಮಕ ಠಾಣೆ ಬೇಕೆಂಬ ಬೇಡಿಕೆ ಹೆಚ್ಚಿದೆ. ಯಾವುದೇ ಅವಘಡ ಸಂಭವಿಸಿದರೆ, ಉಡುಪಿ ಇಂದ ಅಗ್ನಿಶಾಮಕ ವಾಹನ ಹೋಗಬೇಕಾಗಿದೆ.ಇದು ಸಾರ್ವಜನಿಕ ರ ಆಕ್ರೋಶ ಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!