ಜನ ಮನದ ನಾಡಿ ಮಿಡಿತ

Advertisement

ಪೈನಾಪಲ್ ತೋಟ ಹಾಗೂ ಗಿಡ ಮರಗಳು ಬೆಂಕಿಗಾಹುತಿ…!

 

ಉಡುಪಿ : ಪೈನಾಪಲ್ ತೋಟ ಹಾಗೂ ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆ ಬ್ರಹ್ಮಾವರ ತಾಲೂಕಿನ ನೀಲಾವರದಲ್ಲಿ ಸಂಭವಿಸಿದೆ.

ಮಟಪಾಡಿ ಗ್ರಾಮದಿಂದ ನೀಲಾವರ ಕಡೆ ಹೋಗುವ ಮಾರ್ಗದ ಅಕ್ಕ ಪಕ್ಕದ ರಸ್ತೆಗಳಲ್ಲಿ ಬೆಂಕಿ ಅಬ್ಬರ ಜೋರಾಗಿತ್ತು. ಜೆನಿತ್ ಡೈ ಮೇಕರ್ ಇಂಡಸ್ಟ್ರಿ ಸಮೀಪದ ರಸ್ತೆಯ ಅಕ್ಕಪಕ್ಕಗಳಲ್ಲಿ ಬೆಂಕಿ ಕಾಣಿಸಿಕೊಂಡು, ನಂತರ ಹಬ್ಬಲಾರಂಭಿಸಿದೆ. ಪರಿಸರದಲ್ಲಿದ್ದ ಪೈನಾಪಲ್ ತೋಟ ಹಾಗೂ ಒಣಹುಲ್ಲು, ಗಿಡ ಗಂಟಿಗಳು ಸುಟ್ಟು ಕರಕಲಾಗಿವೆ. ಪರಿಸರದ ಅಡಿಕೆ ತೋಟ, ತೆಂಗು, ಹಲಸು ಗಿಡಗಳು ಕೂಡ ಸುಟ್ಟು ಹೋಗಿವೆ . ಪರಿಸರದಲ್ಲಿ ಸಣ್ಣಪುಟ್ಟ ಕೈಗಾರಿಕೆಗಳಿದ್ದು ಸಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳೀಯರು ಮತ್ತು ಅಗ್ನಿಶಾಮಕದಳದ ಕಾರ್ಯಾಚರಣೆಯಿಂದ ಅನಾಹುತ ತಪ್ಪಿದೆ. ಇತ್ತೀಚಿನ ದಿನಗಳಲ್ಲಿ ಬ್ರಹ್ಮಾವರ ಪರಿಸರದಲ್ಲಿ ಪದೇ ಪದೇ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು ತಾಲೂಕು ಕೇಂದ್ರದಲ್ಲಿ ಶಾಶ್ವತ ಅಗ್ನಿಶಾಮಕ ಠಾಣೆ ಬೇಕೆಂಬ ಬೇಡಿಕೆ ಹೆಚ್ಚಿದೆ. ಯಾವುದೇ ಅವಘಡ ಸಂಭವಿಸಿದರೆ, ಉಡುಪಿ ಇಂದ ಅಗ್ನಿಶಾಮಕ ವಾಹನ ಹೋಗಬೇಕಾಗಿದೆ.ಇದು ಸಾರ್ವಜನಿಕ ರ ಆಕ್ರೋಶ ಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!