ಬೈಕ್ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಣಿಪಾಲದ ಲಕ್ಷ್ಮೀನಗರ ಸುಧಾ ಫರ್ನಿಚರ್ ಬಳಿ ಸಂಭವಿಸಿದೆ.

ಇಂದಿರಾನಗರದ ಬುಡ್ನಾರ್ ನಿವಾಸಿ ಪ್ರವೀಣ್ ಶೆಟ್ಟಿ ಮೃತ ದುರ್ದೈವಿ. ಇವರು ತನ್ನ ಬೈಕ್ನಲ್ಲಿ ಉಡುಪಿಯಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ರಿಯಲ್ ಎಸ್ಟೇಟ್ ಸಹಿತ ಹಲವು ಉದ್ಯಮದಲ್ಲಿ ತೊಡಗಿಕೊಂಡಿದ್ದ ಪ್ರವೀಣ್ ಕಳೆದ ಒಂದೂವರೇ ವರ್ಷದ ಹಿಂದೆಯಷ್ಟೇ ಯುವತಿಯೊರ್ವಳನ್ನು ಪ್ರೀತಿಸಿ ಮದುವೆ ಆಗಿದ್ರು. ಆದರೆ ನಡೆದ ದುರ್ಘಟನೆಯಲ್ಲಿ ಇಡೀ ಕುಟುಂಬ ಶೋಕದಲ್ಲಿ ಮುಳುಗಿದೆ.



