ಜನ ಮನದ ನಾಡಿ ಮಿಡಿತ

Advertisement

9 ಗಂಟೆ ನಿರಂತರ ಶಸ್ತ್ರಚಿಕಿತ್ಸೆ! ಸಯಾಮಿ ಸಹೋದರಿಯರನ್ನು ಯಶಸ್ವಿಯಾಗಿ ಬೇರ್ಪಡಿಸಿದ ದೆಹಲಿ ಏಮ್ಸ್ ವೈದ್ಯರು

ನವದೆಹಲಿ: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS)ನ ತಜ್ಞ ವೈದ್ಯರು 9 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಒಂದು ವರ್ಷದ ಸಯಾಮಿ ಶಿಶುಗಳನ್ನು ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ.
ಉತ್ತರ ಪ್ರದೇಶದ ಬರೇಲಿ ಮೂಲದ ದೀಪಿಕಾ ಮತ್ತು ಅಂಕುರ್ ಗುಪ್ತಾ ಅವರಿಗೆ ರಿದ್ಧಿ ಮತ್ತು ಸಿದ್ಧಿ ಎಂಬ ಅವಳಿ ಹೆಣ್ಣು ಮಕ್ಕಳಿದ್ದರು. ಈ ಮಕ್ಕಳ ಎದೆ ಮತ್ತು ಹೊಟ್ಟೆ ಭಾಗಗಳು ಸೇರಿಕೊಂಡಿದ್ದವು.
ರಿದ್ಧಿ ಮತ್ತು ಸಿದ್ಧಿ ಸುಮಾರು 1 ವರ್ಷದ ಅವಳಿ ಸಹೋದರಿಯರು. ಹುಟ್ಟಿನಿಂದಲೇ ಪರಸ್ಪರ ಅಂಟಿಕೊಂಡಿದ್ದರು. ದೇಹದ ಅನೇಕ ಭಾಗಗಳು ಒಂದಕ್ಕೊಂದು ಸಂಪರ್ಕ ಹೊಂದಿದ್ದವು.


ಬರೇಲಿಯಲ್ಲಿ ದೀಪಿಕಾ ಗುಪ್ತಾ ಅವರ ಗರ್ಭಧಾರಣೆಯ ನಾಲ್ಕನೇ ತಿಂಗಳಲ್ಲಿ ಥೋರಾಕೊ-ಆಂಫಾಲೋಪಾಗಸ್ ಸಂಯೋಜಿತ ಅವಳಿಗಳೆಂದು ಜನನದ ಮೊದಲೇ ಗುರುತಿಸಲಾಗಿತ್ತು. ಕಳೆದ ವರ್ಷ ಜುಲೈ 7ರಂದು ಜನಿಸಿದ ಮಕ್ಕಳು ಐದು ತಿಂಗಳ ಕಾಲ ಐಸಿಯುನಲ್ಲಿದ್ದರು. ಸುದೀರ್ಘ ಶಸ್ತ್ರಚಿಕಿತ್ಸೆಯ ನಂತರ ಜೂನ್ 8ರಂದು ಮಕ್ಕಳನ್ನು ಬೇರ್ಪಡಿಸಲಾಯಿತು. ಅವಳಿಗಳು ತಮ್ಮ ಮೊದಲ ಹುಟ್ಟುಹಬ್ಬವನ್ನು ಆಸ್ಪತ್ರೆಯಲ್ಲೇ ಆಚರಿಸಿಕೊಂಡರು” ಎಂದು ಪೀಡಿಯಾಟ್ರಿಕ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ಮಿನು ಬಾಜ್ಪೈ ಹೇಳಿದ್ದಾರೆ.

ಏಮ್ಸ್ ಆಸ್ಪತ್ರೆಯು ಕಳೆದ ಕೆಲವು ವರ್ಷಗಳಲ್ಲಿ ಇಂತಹ ಹಲವು ಆಪರೇಷನ್‌ಗಳನ್ನು ಮಾಡಿದೆ. ಇಬ್ಬರು ಸಹೋದರಿಯರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಭವಿಷ್ಯದಲ್ಲಿ ಈ ಶಸ್ತ್ರಚಿಕಿತ್ಸೆಯಿಂದ ಅವರು ಯಾವುದೇ ಸಮಸ್ಯೆ ಎದುರಿಸುವುದಿಲ್ಲ. ಹೀಗೆ ಅವಳಿ ಮಕ್ಕಳು ಜನಿಸುವುದು ಸಾವಿರದಲ್ಲಿ ಒಬ್ಬರಿಗೆ ಮಾತ್ರ. ಚಿಕಿತ್ಸೆಯ ನಂತರ ಪೋಷಕರು ತುಂಬಾ ಸಂತೋಷವಾಗಿದ್ದಾರೆ” ಎಂದು ವೈದ್ಯರು ತಿಳಿಸಿದ್ದಾರೆ.

ದೇಶದ ಅತಿದೊಡ್ಡ ಆಸ್ಪತ್ರೆಯಾದ ಏಮ್ಸ್ ವೈದ್ಯರು ಆಧುನಿಕ ವೈದ್ಯಕೀಯ ವಿಜ್ಞಾನದಲ್ಲಿ ಏಮ್ಸ್‌ ಹೆಸರೇಕೆ ಉತ್ತುಂಗದಲ್ಲಿದೆ ಎಂದು ಈ ಅಪರೂಪದ ಶಸ್ತ್ರಚಿಕಿತ್ಸೆಯ ಮೂಲಕ ಸಾಬೀತುಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!