ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಶ್ರೀ ಶಾರದಾ ಭಜನಾ ಮಂದಿರ ನಗ್ರಿ ಇಲ್ಲಿಂದ 1.3 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಹೊಸ ಕಾಂಕ್ರೀಟ್ ರಸ್ತೆ!

ಶ್ರೀ ಶಾರದಾ ಭಜನಾ ಮಂದಿರ ನಗ್ರಿ ಇಲ್ಲಿಂದ ಶ್ರೀ ಮಿತ್ತಮಜಲು ಕ್ಷೇತ್ರದ ರಸ್ತೆಗೆ ಸಂಪರ್ಕ ಕಲ್ಪಿಸುವ ಸುಮಾರು 1.3 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಹೊಸ ಕಾಂಕ್ರೀಟ್ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸ್ಥಳೀಯರೊಂದಿಗೆ ವೀಕ್ಷಣೆ ನಡೆಸಿದ ಬಳಿಕ ಸಾರ್ವಜನಿಕರಿಗೆ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು, ಮೂಲಭೂತ ಸೌಕರ್ಯಗಳ ಪಟ್ಟಿಯಲ್ಲಿ ರಸ್ತೆ ಸಂಪರ್ಕವೂ ಒಂದಾಗಿದ್ದು, ಗ್ರಾಮದ ಮೂಲೆಮೂಲೆಗಳಿಗೆ ಸುಸಜ್ಜಿತವಾದ ರಸ್ತೆಯ ನಿರ್ಮಾಣ ಮಾಡಿ ಸಂಪರ್ಕ ಕಲ್ಪಿಸಿದರೆ ಗ್ರಾಮದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ. ಪುದ್ದಾರ್ ಮೆಚ್ಚಿ ಜಾತ್ರೆಯು ದಿನಾಂಕ 14, ಬುಧವಾರ ರಾತ್ರಿ ಉಳ್ಳಾಲ್ತಿ ಮೆಚ್ಚಿಯೊಂದಿಗೆ ಪ್ರಾರಂಭವಾಗಿ ದಿನಾಂಕ 15, ಗುರುವಾರ ಬೆಳಗ್ಗೆ 10.30 ಕ್ಕೆ ದೈಯ್ಯಂಗುಲು ನೇಮೋತ್ಸವ ಹಾಗೂ ರಾತ್ರಿ ನಾಲ್ಕೆತ್ತಾಯ ದೈವದ ಮೆಚ್ಚಿಮೂಲಕ ನಡೆಯಲಿದೆ. ಹಾಗಾಗಿ ಭಕ್ತರಿಗೆ ಬರಲು ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆಯನ್ನು ಸಾರ್ವಜನಿಕರ ಸಂಚಾರಕ್ಕೆ ಬಿಟ್ಟು ಕೊಡಲಾಗಿದೆ ಎಂದು ನಗ್ರಿಗುತ್ತು ವಿವೇಕ್ ಶೆಟ್ಟಿ ತಿಳಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಶ್ರೀಕಾಂತ್ ಶೆಟ್ಟಿ ಸಜೀಪ, ಸಜೀಪ ಮೂಡ ಗ್ರಾ.ಪಂ.ಮಾಜಿ ಅಧ್ಯಕ್ಷ ಶೋಬಿತ್ ಪೂಂಜ, ಜಿ.ಪಂ.ಮಾಜಿ ಸದಸ್ಯ ರವೀಂದ್ರ ಕಂಬಳಿ, ಸೇರಿದಂತೆ ಮತ್ತಿತತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!