ಭಾರತದ ಗ್ರಾಮೀಣ ಭಾಗದಲ್ಲಿ ಶೇಕಡ 80% ರಷ್ಟು ಮಹಿಳೆಯರು ಜೀವನೋಪಾಯಕ್ಕಾಗಿ ಕೃಷಿಯನ್ನೆ ಅವಲಂಬಿಸಿದ್ದು, ತನ್ನ ಹೆಸರಿಗೆ ಒಂದಿಂಚೂ ಭೂಮಿ ಇಲ್ಲದಿದ್ದರೂ ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದಾಳೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ “ಕೃಷಿಯಲ್ಲಿ ಮಹಿಳೆ ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ” ಕುರಿತು ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಸಚಿವರು ಮಾತನಾಡಿದ್ದಾರೆ. ಈ ವೇಳೆ ಸಚಿವರು ಪ್ರಗತಿಪರ ರೈತರಿಗೆ ಹಾಗೂ ಪ್ರಗತಿಪರ ರೈತ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಿದ್ರು, ಬಳಿಕ ಕ್ರಾಪ್ ಇಂಪ್ರುಮೆಂಟ್, ಕ್ರಾಪ್ ಪ್ರೊಡಕ್ಷನ್, ಕ್ರಾಪ್ ಪ್ರೊಟೆಕ್ಷನ್ ಕೃತಿಗಳನ್ನು ಬಿಡುಗಡೆ ಮಾಡಲಾಗಿದೆ.

ಜೆ.ಎಸ್.ಎಸ್ ಮಠ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಕೇವಲ ಮೈಸೂರು ಭಾಗದ ಮಕ್ಕಳಿಗೆ ಸೀಮಿತವಾಗದೆ ವಿವಿಧ ರಾಜ್ಯಗಳ ಮಕ್ಕಳು ಇಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. ಸಾಮಾಜಿಕ ಬದ್ಧತೆ ಹೊಂದಿರುವ ಜೆ ಎಸ್ ಎಸ್ ಸಂಸ್ಥೆ ಅಕ್ಷರ, ಅನ್ನದ ಜೊತೆಗೆ ಸಂಸ್ಕೃತಿಯನ್ನು ಕಲಿಸುತ್ತಿದೆ ಎಂದಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ವಾಟಾಳು ಸೂರ್ಯಸಿಂಹಾಸನ ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು, ಕನಕಪುರದ ಶ್ರೀ ದೇಗುಲ ಮಠದ ಡಾ. ಶ್ರೀ ಚನ್ನಬಸವ ಸ್ವಾಮಿಗಳು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.



