ಜನ ಮನದ ನಾಡಿ ಮಿಡಿತ

Advertisement

ಬೆಳಗಾವಿ: ಮಕ್ಕಳಾಗದ ಕಾರಣ ಕಿರುಕುಳ; ಪತ್ನಿಯನ್ನು ಕೊಂದ ಕಿರಾತಕ ಗಂಡ!

ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.

21 ವರ್ಷದ ಪತ್ನಿ ರಾಜೇಶ್ವರಿಯನ್ನು ಪತಿ ಫಕೀರಪ್ಪ ಗಿಲಕ್ಕನವರ ಕೊಲೆ ಮಾಡಿದ್ದಾನೆ. ಬಳಿಕ ಹೃದಯಾಘಾತದಿಂದ ಮೃತಳಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಎನ್ನಲಾಗಿದೆ. ಮದುವೆಯಾಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಹೆಂಡತಿ ಕಾಟ ಕೊಡುತ್ತಿದ್ದಳು. ಕಿರಿಕಿರಿಗೆ ಬೇಸತ್ತಿದ್ದ ಪತಿ ಸಿಟ್ಟಿಗೆದ್ದು ಉಸಿರುಗಟ್ಟಿಸಿ ಪತ್ನಿಯನ್ನೇ ಕೊಲೆ ಮಾಡಿದ್ದು, ಬಳಿಕ ಪತ್ನಿ ಹೃದಯಾಘಾತದಿಂದ ಮೃತಳಾಗಿದ್ದಾಳೆ ಎಂಬುದಾಗಿ ಸಂಬAಧಿಕರೆಲ್ಲರಿಗೂ ಫೋನ್ ಮಾಡಿ ತಿಳಿಸಿದ್ದಾನೆ. ಅಂತ್ಯಕ್ರಿಯೆಗೆ ಬಂದ ಪೋಷಕರಿಗೆ ಮೃತ ರಾಜೇಶ್ವರಿ ಕೊರಳಲ್ಲಿ ಕಾಣಿಸಿದ್ದ ಗುರುತೊಂದನ್ನು ನೋಡಿ ಅನುಮಾನ ವ್ಯಕ್ತವಾಗಿದೆ. ಕೂಡಲೇ ಪೋಷಕರು ಬೈಲಹೊಂಗಲ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಕೊಲೆ ಎಂಬುದು ದೃಢವಾಗಿದೆ. ಕೂಡಲೇ ಪೊಲೀಸರು ಆರೋಪಿ ಫಕೀರಪ್ಪ ಗಿಲಕ್ಕನವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ವಿಚಾರಣೆ ವೇಳೆ ಕೊಲೆಗೈದಿರುವುದಾಗಿ ಆರೋಪಿ ತಪ್ರೊಪ್ಪಿಕೊಂಡಿದ್ದಾನೆ. ಸದ್ಯ ಆರೋಪಿಯನ್ನ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ.

 

 

Leave a Reply

Your email address will not be published. Required fields are marked *

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

error: Content is protected !!