ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಎಕ್ಸ್ ಪ್ರೆಸ್ ಬಸ್ ನಿಂದ ಹೊರಕ್ಕೆ ಎಸೆಯಲ್ಪಟ್ಟ ಮಹಿಳೆ; ಮಾನವೀಯತೆ ಮೆರೆದ ಸಮಾಜ ಸೇವಕ!

ಎಕ್ಸ್ ಪ್ರೆಸ್ ಬಸ್ ನಿಂದ ಹೊರಕ್ಕೆ ಎಸೆಯಲ್ಪಟ್ಟ ಮಹಿಳೆಯೋರ್ವರು ಗಂಭೀರ ಗಾಯಗಳೊಂದಿಗೆ ಹೆದ್ದಾರಿ ಬದಿ ಬಿದ್ದಿರುವುದನ್ನು ಕಂಡ ಸಮಾಜ ಸೇವಕ ಕಟಪಾಡಿ ಅಭಿರಾಜ್ ಸುವರ್ಣ ಅವರು ತನ್ನ ಕಾರ್ ನಲ್ಲಿ ಚಿಕಿತ್ಸೆಗೆ ತುರ್ತಾಗಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆಯನ್ನು ಮೆರೆದ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ.

ಅಂಡರ್ ಪಾಸ್ ಕಾಮಗಾರಿ ನಿರತ ಕಟಪಾಡಿಯ ಬಸ್ ತಂಗುದಾಣದಲ್ಲಿ ಕಟಪಾಡಿ ಮೂಡಬೆಟ್ಟು ಕುದ್ರಾಡಿ ಎಂಬಲ್ಲಿನ ಚಿಕ್ಕ ಪೂಜಾರ್ತಿ (50) ಎಂಬವರು ಉಡುಪಿಯತ್ತ ತೆರಳಲು ಎಕ್ಸ್ ಪ್ರೆಸ್ ಬಸ್ ಹತ್ತಿದ್ದರು. ಬಸ್ ಚಲಿಸುತ್ತಿದ್ದಂತೆಯೇ ಕೆಲವೇ ಕ್ಷಣಗಳಲ್ಲಿ ತಿರುವಿನಲ್ಲಿ ಈಕೆ ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಇದೇ ಹಾದಿಯಾಗಿ ತೆರಳುತ್ತಿದ್ದ ಅಭಿರಾಜ್ ಸುವರ್ಣ ಈಕೆಯನ್ನು ಚಿಕಿತ್ಸೆಗೆ ಕರೆದೊಯ್ಯಲು ಯಾವುದೇ ವಾಹನಗಳ ಲಭ್ಯವಿಲ್ಲದುದನ್ನು ಗಮನಿಸಿ, ಮತ್ತು ತುರ್ತು ಚಿಕಿತ್ಸೆಯ ಅಗತ್ಯತೆಯನ್ನು ಮನಗಂಡು ತನ್ನ ಕಾರ್ ಮೂಲಕ ಉಡುಪಿಯ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನು ಐಸಿಯು ವಿನಲ್ಲಿ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!