ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಮನೆಗೆ ನುಗ್ಗಿ ಕಪಾಟು ಜಾಲಾಡಿದ ಕಳ್ಳರು; ಬೆಲೆಬಾಳುವ ವಸ್ತು ಕಳ್ಳತನ!

ಕಳ್ಳರು ಮನೆಗೆ ನುಗ್ಗಿ ಕಪಾಟು ಜಾಲಾಡಿ ಬೆಲೆ ಬಾಳುವ ವಸ್ತುಗಳನ್ನು ಕಳವುಗೈದ ಘಟನೆ ತಲಪಾಡಿ ಗ್ರಾಮ ಕೆ.ಸಿನಗರ ಪಲಾಹ್ ಸ್ಕೂಲ್ ಬಳಿ ನಡೆದಿದ್ದು, ಭಾನುವಾರ ಬೆಳಕಿಗೆ ಬಂದಿದೆ.

ಕೆಸಿನಗರ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಎಲಿಯಾರ್ ಪದವು ಅಂಗಡಿ ಹೊಂದಿದ್ದ ಅಬೂಬಕ್ಕರ್ ಅವರು ಕಳೆದ 25 ವರ್ಷ ಗಳಿಂದ ಸೌದಿ ಅಲ್ ಕೋಬಾರ್ ನಲ್ಲಿ ಉದ್ಯೋಗದಲ್ಲಿ ಇದ್ದು, ಕಳೆದ ಆಗಸ್ಟ್ ತಿಂಗಳಲ್ಲಿ ಅಬೂಬಕ್ಕರ್ ಪತ್ನಿ ಝೀನತ್ ಪುತ್ರ ಇಝಾಮ್ ಹಾಗೂ ಪುತ್ರಿ ಸಫಾ ಈ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಸೌದಿಗೆ ಹೋಗಿದ್ದರು.

ಇದರ ಬಳಿಕ ಅಬೂಬಕ್ಕರ್ ಅವರ ಸಹೋದರ ನ ಪತ್ನಿ ಮೈನಾಝ್ ಇಂದು ಮನೆ ನೋಡಿ ಸ್ವಚ್ಛ ಮಾಡಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಮನೆಯ ಮುಂಬಾಗಿಲನ್ನು ಒಡೆದು ಒಳ ನುಗ್ಗಿದ ಕಳ್ಳರು ಕೆಳ ಮಹಡಿಯಲ್ಲಿರುವ ಮೂರು ಕೊಠಡಿಗಳು ಹಾಗೂ ಮೊದಲ ಮಹಡಿಯಲ್ಲಿ ಇರುವ ಒಂದು ಕೊಠಡಿಯಲ್ಲಿರುವ ಒಟ್ಟು ನಾಲ್ಕು ಕಪಾಟುಗಳನ್ನು ಒಡೆದು ಜಾಲಾಡಿದ್ದಾರೆ. ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಅಲ್ಲದೇ ಅಡುಗೆ ಕೋಣೆಯ ಕಪಾಟುಗಳನ್ನು ಜಾಲಾಡಿದ ಕಳ್ಳರಿಗೆ ಚಿನ್ನಾಭರಣ ಸಿಕ್ಕಿಲ್ಲ.

ಈ ಹಿನ್ನೆಲೆಯಲ್ಲಿ ಕಳ್ಳರು ಕಪಾಟಿನಲ್ಲಿದ್ದ ಬೆಲೆ ಬಾಳುವ ವಾಚ್, ಮೊಬೈಲ್ ಕಳವುಗೈದಿದ್ದಾರೆ. ಈ ಮನೆಯ ಕುಟುಂಬ ವಿದೇಶಕ್ಕೆ ಹೋಗುವ ಮೊದಲೇ ಚಿನ್ನಾಭರಣಗಳನ್ನು ಸೇಫ್ ಲಾಕರ್‌ನಲ್ಲಿ ಇಟ್ಟು ಹೋಗಿದ್ದರು ಎಂದು ಅಬೂಬಕ್ಕರ್ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಕಳವುಗೈದ ಆರೋಪಿಗಳು ಚಿನ್ನಾಭರಣ ದೋಚಲು ಬಂದಿದ್ದು, ಚಿನ್ನಾಭರಣ ಸಿಗದ ಕಾರಣ ಮೊಬೈಲ್, ವಾಚ್ ಕಳವುಗೈದಿರಬೇಕು ಎಂದು ಶಂಕಿಸಲಾಗಿದೆ. ಈ ಬಗ್ಗೆ ಅಬೂಬಕ್ಕರ್ ಅವರ ಬಾವ ಶೇಖಬ್ಬ ಅವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!