ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮೂಡಬಿದ್ರೆಯಲ್ಲಿ ಬೆಳೆ ಸಂರಕ್ಷಣೆ ಕುರಿತ ಮಾಹಿತಿ ಕಾರ್ಯಾಗಾರ.

ದಿಶಾ ಟ್ರಸ್ಟ್ ರಿ. ಕೈಕಂಬ ಮಂಗಳೂರು ಮತ್ತು ಮಂಗಳೂರು ತಾಲೂಕು ತೋಟಗಾರಿಕಾ ಇಲಾಖೆ ಜಂಟಿ ಸಹಭಾಗಿತ್ವದಲ್ಲಿ ಬೆಳೆ ಸಂರಕ್ಷಣೆ ಕುರಿತ ಮಾಹಿತಿ ಕಾರ್ಯಾಗಾರ ಮೂಡಬಿದ್ರೆಯಲ್ಲಿ ನಡೆಯಿತು.

ಕೃಷಿಕರ ನೆಲ ಜಲ ಅಭಿವೃದ್ಧಿ ಸಂಘ ಶಿರ್ತಾಡಿ, ಮಕ್ಕಿ ಕಜೆ ಇವರ ಸಹಕಾರದೊಂದಿಗೆ ಮೂಡಬಿದ್ರೆ ತಾಲೂಕಿನ ಶಿರ್ತಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ದಿಶಾ ಟ್ರಸ್ಟ್ನ ಯೋಜನಾ ನಿರ್ದೇಶಕರಾದ ಡಾ. ಐರಿನ್ ವೇಗಸ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮುಂದಿನ ಮೂರು ವರ್ಷಗಳಲ್ಲಿ ನೈಸರ್ಗಿಕ ಸಂಪನ್ಯೂಲ ಯೋಜನೆಯನ್ನು ಅನುಷ್ಠಾನ ಮಾಡುವಾಗ ಕೃಷಿಕರು ಸಾವಯವ ಕೃಷಿಯನ್ನು ಹೆಚ್ಚಿನ ಭೂಮಿಯಲ್ಲಿ ಮಾಡಿ ಅದರೊಂದಿಗೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು  ತುರ್ತು ಕ್ರಮಕೈಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ತೋಟಗಾರಿಕಾ ಇಲಾಖೆಯ ಅಧಿಕಾರಿ ಪ್ರವೀಣ್ ಕೆ. ಅವರು ಮಾತನಾಡಿ ಕೃಷಿಕರು ಬೆಳೆ ಸಂರಕ್ಷಣೆ ಮಾಡುವ ವಿಧಾನ, ಅದರಲ್ಲಿ ಒಳಗೊಳ್ಳುವ ಕ್ರಮಗಳು, ಅಡಿಕೆ ಬೆಳೆಯುವ ವಿಧಾನ, ನೀರಾವರಿ, ರಸಗೊಬ್ಬರಗಳ ಸಮರ್ಪಕ ಬಳಕೆ, ರೋಗಭಾದೆ ಮತ್ತು ನಿಯಂತ್ರಣಗಳ ಬಗ್ಗೆ ಮಾಹಿತಿ ನೀಡಿದರು. ಅಡಿಕೆಯೊಂದಿಗೆ ಮಿಶ್ರಕೃಷಿ ಹಾಗೂ ರೈತರಿಗೆ ಇಲಾಖೆಯಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಸವಿಸ್ತಾರವಾದ ಮಾಹಿತಿಯನ್ನು ಕೃಷಿಕರಿಗೆ ನೀಡಿದರು.

ಕಾರ್ಯಕ್ರಮದಲ್ಲಿ ಯೋಜನಾ ಸಂಯೋಜಕರಾದ ನಿಹಾಲ್ ಮಚಾದೋ, ಕ್ಷೇತ್ರ ಸಂಯೋಜಕಿಯರಾದ ಮೋಹಿನಿ, ರೂಪಕಲಾ, ಕಾರ್ಯಕ್ರಮ ಸಹಾಯಕರಾದ ದೀಕ್ಷಿತ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!