ಮಂಜೇಶ್ವರ :
ಕುಂಜತ್ತೂರು ತೂಮಿನಾಡು ಹಿಲ್ ಟಾಪ್ ನಗರದಲ್ಲಿ ಮಾದಕ ವ್ಯಸನಿ ತಂದೆಯೊಬ್ಬ ತನ್ನ ಸ್ವಂತ ಪುತ್ರಿಯನ್ನೇ ಇರಿದು ಕೊಲೆಗೈದ ಘಟನೆ ನಡೆದಿದೆ.

ಕುಂಜತ್ತೂರು ತೂಮಿನಾಡು ಹಿಲ್ ಟಾಪ್ ನಗರ ನಿವಾಸಿ ಉಮರ್ ಪಾಷ ಎಂಬಾತ ತನ್ನ ಪುತ್ರಿ ಮರಿಯಮತ್ ಜುಮೈರಾರನ್ನು ಇರಿದು ಕೊಲೆ ಮಾಡಿದ್ದಾನೆ. ಘಟನೆಯನ್ನು ತಡೆಯಲು ಮುಂದಾದ ಯುವತಿಯ ದೊಡ್ಡಪ್ಪ ಶೇಕುಂಞಗೂ ಇರಿತವಾಗಿದೆ. ಅವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಧಾವಿಸಿದ ಮಂಜೇಶ್ವರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹತ್ಯೆಗೆ ಕಾರಣ ಮತ್ತು ಹಿನ್ನೆಲೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರದೇಶದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.



