ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ; ಆರೊಪಿಗಳ ಬಂಧನ…!

ಬೆಂಗಳೂರು ನಗರದಿಂದ ಮಾದಕವಸ್ತು ಎಂಡಿಎಂಎಯನ್ನು ಖರೀದಿಸಿಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಮಂಗಳೂರು ಸಿ.ಸಿ.ಬಿ.ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ತಂದು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೂದು ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಮಾರಾಟ ಮಾಡಲು ಆರೋಪಿಗಳು ಯತ್ನಿಸಿದ್ದಾರೆ. ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಆರೋಪಿಗಳು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರನ್ನು ಪತ್ತೆ ಹಚ್ಚಿ ಆರೋಪಿಗಳ ಬಂಧನ ಮಾಡಿದ್ದಾರೆ. ಮುಸ್ತಫಾ ಸೀದಿಯಬ್ಬ, ಮೈಯದ್ದಿ, ಮೊಹಮ್ಮದ್ ಶಿಫಾನ್, ಎಂಬಾತರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ರೂ.11,90,000/- ಮೌಲ್ಯದ 118.13 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಮೊಬೈಲ್ ಫೋನ್-4, ಬೂದು ಬಣ್ಣದ ಸ್ವಿಪ್ಟ್ ಕಾರು ಸಹಿತ ಒಟ್ಟು ರೂ. 17,95,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದಾರೆ.

Leave a Reply

Your email address will not be published. Required fields are marked *

ತಿರುವನಂತಪುರ: ಸಾವಿನಲ್ಲೂ ಸಾರ್ಥಕತೆ ಮೆರೆದ ಪುಟ್ಟ ಕಂದಮ್ಮ!

ಉಡುಪಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಮರಳು, ಬೋಟ್ ಸಹಿತ 22 ಮಂದಿಯ ಬಂಧನ…!

ಉಡುಪಿ: ವಂಚನೆ ಪ್ರಕರಣ; ಓರ್ವ ಮಹಿಳೆ ಸಹಿತ ಇಬ್ಬರ ಬಂಧನ…!

ಮಂಜೇಶ್ವರ: ಅಕ್ರಮ ಗಾಂಜಾ ಸಾಗಟ; ಪತ್ತೆ ಹಚ್ಚಿದ್ದ ಅಬಕಾರಿ ಅಧಿಕಾರಿಗಳು…..!

ಬೆಂಗಳೂರು: ಹೊಸಕೋಟೆಯಲ್ಲಿ ಭೀಕರ ರಸ್ತೆ ಅಪಘಾತ; 7 ಮಂದಿ ಮೃತ್ಯು!

ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ.

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

error: Content is protected !!