ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ:ಗ್ರಾಮೀಣ ಭಾಗದಲ್ಲಿ ಕನ್ನಡದ ಮನಸ್ಸು ಕ್ರಿಯಾಶೀಲ- ಮೋಹನ್ ಆಳ್ವ

ಮುಲ್ಕಿ: ಗ್ರಾಮೀಣ ಪ್ರದೇಶಗಳಲ್ಲಿ ಕನ್ನಡದ ಮತ್ತು ಸಾಹಿತ್ಯದ ಕೆಲಸಗಳು ನಡೆಯುತ್ತಲೇ ಇರುತ್ತವೆ. ಆ ಮೂಲಕ ಕನ್ನಡದ ಮನಸ್ಸು ಕ್ರಿಯಾಶೀಲವಾಗಿರುತ್ತದೆ ಎಂದು ಮೂಡುಬಿದ್ರೆ ಡಾ. ಮೋಹನ ಆಳ್ವ ಹೇಳಿದರು.

ಅವರು ಶುಕ್ರವಾರ ಕಿನ್ನಿಗೋಳಿ ಅನಂತ ಪ್ರಕಾಶದ ಗಾಯತ್ರೀ ಪ್ರಕಾಶನದಿಂದ ಪ್ರಕಟಿತ 169ನೇ ಕೃತಿ ರಾಧಾಕೃಷ್ಣ ಕಲ್ಚಾರ್ ಅವರ ಲೇಖನಗಳ ಕೃತಿ ತಲ್ಲಣಿಸದಿರು ಮನವೆ, 170ನೆಯ ಕೃತಿ ಕಲ್ಚಾರ್ ಅವರ ಕಾದಂಬರಿ ಕೂಡುಮನೆ ಹಾಗೂ 171ನೆಯ ಕೃತಿ ಟಿ.ಎಂ. ರಮೇಶ್ ಅವರ ಲಲಿತಪ್ರಬಂಧಗಳ ಸಂಕಲನ ನಗುಬಿಗು ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.ಡಾ. ಭಾಸ್ಕರನಾಂದ ಕುಮಾರ್ ಮಾತನಾಡಿ ಸಾಹಿತ್ಯದ ಬರವಣಿಗೆ, ಓದು ಹಾಗೂ ಕೇಳುವಿಕೆಗಳು ಮನಸ್ಸಿನ ಆನಂದವನ್ನು ಹೆಚ್ಚಿಸುತ್ತವೆ, ಕಿನ್ನಿಗೋಳಿಯ ಅನಂತ ಪ್ರಕಾಶ ಸಂಸ್ಥೆ ನಡೆಸಿಕೊಂಡು ಬರುತ್ತಿರುವ ಸಾಹಿತ್ಯ ಚಟುವಟಿಕೆಗಳು ಅಭಿನಂದನೀಯ.

ಕಲ್ಚಾರ್ ಅವರ ಕೃತಿಯ ಓದು ಪುರಾಣದ ಜ್ಞಾನದಾಹಿಗೆ ಉತ್ತಮ ಕೃತಿ ಎಂದರು. ಉಡುಪಿಯ ಮುರಳಿ ಕಡೆಕಾರ್ ಮಾತನಾಡಿ, ತಾಳಮದ್ದಲೆ ಕ್ಷೇತ್ರದಲ್ಲಿ ಹೆಸರು ಮಾಡಿರುವ ಕಲ್ಚಾರ್ ಅವರ ಕಾದಂಬರಿ ಕೂಡುಮನೆ ಸರಾಗ ಓದಿಸಿಕೊಂಡು ಹೋಗುವ ಉತ್ತಮ ಕೃತಿ. ಹಿಂದಿನ ಕೂಡುಕುಟುಂಬದ ಬಾಂಧವ್ಯದ ಸೊಗಸು ಇಂದಿಲ್ಲ. ಸ್ವಾರ್ಥದ ಬದುಕಿನ ಮನಸ್ಥಿತಿಯಿಂದಾಗಿ ಮನೆಗಳು ಒಡೆದುಹೋಗುತ್ತಿವೆ ಎಂದರು.

ಅನಂತ ಪ್ರಕಾಶ ಸಂಸ್ಥೆಯ ಕೊಡೆತ್ತೂರು ಸಚ್ಚಿದಾನಂದ ಉಡುಪ, ಕೃತಿಕಾರ ರಾಧಾಕೃಷ್ಣ ಕಲ್ಚಾರ್ ಕೊಡೆತ್ತೂರು ವೇದವ್ಯಾಸ ಉಡುಪ ಪ್ರಕಾಶ್ ಆಚಾರ್ ಉಪಸ್ಥಿತರಿದ್ದರು..

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!