ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಡಾ| ಕನ್ಯಾನ ಸದಾಶಿವ ಶೆಟ್ಟಿಯವರಿಗೆ ನಾವು ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ: ಕೆ.ಕೆ. ಶೆಟ್ಟಿ ಕುತ್ತಿಕ್ಕಾರು

ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮ ಜಾಲತಾಣಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಕಾಸರಗೋಡು ಜಿಲ್ಲೆಯ ಕೂಳೂರು ಗ್ರಾಮದ ಪ್ರತಿಷ್ಠಿತ ಉದ್ಯಮಿಗಳು ಹಾಗೂ ಕೊಡುಗೈ ದಾನಿಗಳಾದ ಡಾ| ಸದಾಶಿವ ಶೆಟ್ಟಿ ಕನ್ಯಾನ ಇವರ ಮೇಲೆ ನಡೆಯುತ್ತಿರುವ ಅಪಪ್ರಚಾರ, ಇಲ್ಲ ಸಲ್ಲದ ಮಾನಹಾನಿ ಹಾಗೂ ಆರೋಪಗಳು ಸಾರ್ವಜನಿಕವಾಗಿ ಚರ್ಚೆಯಾಗಿರುವುದು ತುಂಬಾ ಬೇಸರದ ಸಂಗತಿ ಎಂದು ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಬಿ.ಸುಬ್ಬಯ ರೈ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.

ರಾಜರಾಜೇಶ್ವರಿ ದೇವಸ್ಥಾನ ಇದರ ಆಡಳಿತ ಮೊಕ್ತೇಸರರಾದ ಕೆ.ಕೆ. ಶೆಟ್ಟಿ ಕುತ್ತಿಕ್ಕಾರು ಮಾತನಾಡಿ, ಕೆಲವು ದಿನಗಳಿಂದ ನಡೆಯುತ್ತಿರುವ ಘಟನೆಗಳಿಂದ ಮನನೊಂದು ಕುಳೂರು ಕನ್ಯಾನ ಡಾ| ಸದಾಶಿವ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯೊಂದನ್ನು ನೀಡಿರುವುದು ಸಮಸ್ತ ಕಾಸರಗೋಡು ಜಿಲ್ಲೆಯ ಬಂಟಬಾಂಧವರಿಗೆ ಆಘಾತ ಉಂಟು ಮಾಡಿರುತ್ತದೆ. ಕಾಸರಗೋಡಿನ ಬಂಟರು ಎಲ್ಲರೂ ಒಗ್ಗಟ್ಟಿನಿಂದ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಆಗಿರುವ ನೋವಿನಲ್ಲಿ ನಾವು ಪೂರ್ಣ ಪ್ರಮಾಣದಲ್ಲಿ ಭಾಗಿಯಾಗಿರುತ್ತೇವೆ ಎಂದರು.

ಮುಂದಿನ ದಿನಗಳಲ್ಲಿ ಡಾ| ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಪೂರ್ಣ ಬೆಂಬಲವನ್ನು ಈ ಮೂಲಕ ನೀಡುತ್ತೇವೆ. ಸಮಾಜ ಬಾಂಧವರಲ್ಲಿ ವಿನಂತಿಯೇನೆಂದರೆ ಇಂದಿನವರೆಗೆ ನಾವೆಲ್ಲರೂ ಒಗ್ಗಟ್ಟಿನಿಂದ ಸಾಮರಸ್ಯದಿಂದ ಹಾಗೂ ಸೌಹಾರ್ದತೆಯಿಂದ ನಡೆದುಕೊಂಡು ಬಂದಿರುತ್ತೇವೆ. ಇನ್ನು ಮುಂದೆಯೂ ಇದೇ ರೀತಿಯಲ್ಲಿ ನಡೆದುಕೊಳ್ಳಬೇಕಾಗಿ ಎಲ್ಲಾ ಸಮಾಜ ಭಾಂದವರಲ್ಲಿ ಕಳಕಳಿಯಿಂದ ವಿನಯಪೂರ್ವಕವಾಗಿ ವಿನಂತಿಸುತ್ತೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಮೋಹನ ರೈ ಕಯ್ಯಾರು, ಗೋಪಾಲಕೃಷ್ಣ ಶೆಟ್ಟಿ ಕುತ್ತಿಕ್ಕಾರು, ಕಾರ್ತಿಕ್ ಶೆಟ್ಟಿ ಮಜ್ಜಿಬೈಲ್, ಸುರೇಶ್ ಶೆಟ್ಟಿ ಕುಂಜತ್ತೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!