ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರಕ್ತದಲ್ಲೇ ಹುಡುಗಿಯ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡ ಯುವಕ….!

ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟೆಂಟ್ ಒಂದರಲ್ಲಿ ನಡೆದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಪೆರುವಾಡ್ ನಿವಾಸಿ ರೋಶನ್ ಮೃತಪಟ್ಟ ಯುವಕ. ಕದ್ರಿ ಪಾರ್ಕ್ ಬಳಿಯ ಐಸ್ ಕ್ರೀಂ ಅಂಗಡಿ ಒಂದರಲ್ಲಿ ಕೆಲಸಕ್ಕಿದ್ದ ರೋಶನ್ ನಾಲ್ಕು ತಿಂಗಳಿನಿಂದ ಅಪಾರ್ಟೆಂಟಿನಲ್ಲಿ ಇತರೇ ಯುವಕರೊಂದಿಗೆ ಬಾಡಿಗೆಗೆ ನೆಲೆಸಿದ್ದ. ತನ್ನ ಕೈಯನ್ನು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದು ಕೊಠಡಿಯಲ್ಲಿ ರಕ್ತದ ಕೋಡಿಯೇ ಹರಿದಿದೆ. ಬಳಿಕ ನೇಣು ಬಿಗಿದುಕೊಂಡಿರುವ ಸಾಧ್ಯತೆಯಿದೆ. ಕೊಠಡಿಯಲ್ಲಿ ಮದ್ಯದ ಬಾಟಲಿಯೂ ಪತ್ತೆಯಾಗಿದೆ. ಈತ ತನ್ನ ಕೊಠಡಿಯಿಂದ ಹೊರಗಡೆ ಬರದೇ ಇದ್ದುದರಿಂದ ಇತರರು ಬಾಗಿಲು ತೆಗೆದು ನೋಡಿದಾಗ ಸಾವಿಗೆ ಶರಣಾಗಿದ್ದು ಕಂಡುಬAದಿದೆ.

ಸ್ಥಳದಲ್ಲಿ ರಕ್ತದಲ್ಲೇ ಹುಡುಗಿಯೊಬ್ಬಳ ಹೆಸರನ್ನು ಬರೆದಿದ್ದು ಪತ್ತೆಯಾಗಿದೆ. ಇದಲ್ಲದೆ, ತನ್ನ ವಾಟ್ಸಪ್ ಸ್ಟೇಟಸ್‌ನಲ್ಲಿ ಇದು ನನ್ನ ಕೊನೆಯ ಸ್ಟೇಟಸ್ ಅಂತಲೂ ಬರೆದುಕೊಂಡಿದ್ದಾನೆ. ಪ್ರೇಮ ವೈಫಲ್ಯದಿಂದ ಸಾವಿಗೆ ಶರಣಾಗಿದ್ದಾನೆಯೇ ಎಂಬ ಅನುಮಾನ ಇದೆ. ಏಳು ತಿಂಗಳ ಹಿಂದೆ ರೋಶನ್ ತನ್ನ ಊರಿನಲ್ಲಿಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬುದು ಆತನ ಮನೆಯವರಿಂದ ಪೊಲೀಸರಿಗೆ ತಿಳಿದುಬಂದಿದೆ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!