ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಹಂಪನಕಟ್ಟೆ ಗ್ರಂಥಾಲಯದ ಸನಿಹ ಇರುವ ಮಾರ್ಗದಲ್ಲಿ ಕಸದ ರಾಶಿ….!

ವಿಶ್ವ ವಿದ್ಯಾಲಯ ಕಾಲೇಜು ಹಂಪನಕಟ್ಟೆ ಗ್ರಂಥಾಲಯದ ಸನಿಹ ಇರುವ ಮಾರ್ಗದ ಬದಿಯು ಈ ಮೊದಲು ಹೆಚ್ಚಾಗಿ ಕಸದ ರಾಶಿಯಿಂದಲೇ ತುಂಬಿರುತ್ತಿತ್ತು.

ಇದು ಆ ಮಾರ್ಗವಾಗಿ ಸಂಚಾರ ನಡೆಸುವ ಪ್ರಯಾಣಿಕರಿಗೆ ಕಿರಿ ಕಿರಿಯನ್ನು ತರುತ್ತಿದೆ. ದುರ್ವಾಸನೆಯಿಂದ ಮೂಗು ಮುಚ್ಚಿ ಹೋಗುವಂತೆ ಮಾಡುತ್ತಿದೆ. ಆದರೆ ಆ ಬಳಿಕ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ಮಹಾ ನಗರ ಪಾಲಿಕೆಯು ಆ ಪ್ರದೇಶಕ್ಕೆ ಕಸ ಹಾಕದಂತೆ ಬೇಲಿ ಹಾಕಿತು. ಇದು ನನ್ನ ನಗರ ಸ್ವಚ್ಛತೆ ಕಾಪಾಡುವುದು ನನ್ನ ಧರ್ಮ ಎಂದು ಫಲಕವನ್ನೂ ಹಾಕಿತ್ತು.

ಕೆಲವು ದಿನಗಳ ತನಕ ಎಲ್ಲವು ಸರಿಯಾಗಿತ್ತು. ಅಲ್ಲಿ ಯಾವುದೇ ಕಸದ ರಾಶಿಗಳು ಕಂಡು ಬಂದಿರಲಿಲ್ಲ ಆದರೆ ಇದೀಗ ನಾಯಿ ಬಾಲ ಡೊಂಕು ಎಂಬಂತೆ ಮತ್ತೆ ಅಲ್ಲಿ ಕಸದ ರಾಶಿ ಉದ್ಭವವಾಗಿದೆ. ಕಸ ಬಿಸಾಡಬೇಡಿ ಎಂದು ದಪ್ಪ ಅಕ್ಷರದಲ್ಲಿ ನಾಗರಿಕರಿಗೆ ಸೂಚನೆಯನ್ನು ನೀಡಿದ್ದರೂ ಸಹ ಇದನ್ನು ಗಾಳಿಗೆ ತೂರಿದ್ದಾರೆ. ಇದೀಗ ಅಲ್ಲಿ ಸೀರೆಗಳ ಮೂಟೆಯೇ ಇದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!