ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಭೂಮಿ ಪೂಜೆ.

ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ರೋಹಿಣಿ ಮನೆ ಬಳಿಯಿಂದ ಹರಿಣಾಕ್ಷಿ ಮನೆ ತನಕ 75 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಭೂಮಿ ಪೂಜೆ ನಡೆದಿದೆ.

ನಂತರ ಮಾತನಾಡಿದ ಶಾಸಕರು, ಇದು ಬಹಳಷ್ಟು ವರ್ಷಗಳಿಂದ ಬೇಡಿಕೆಯಿದ್ದ ಅತೀ ಅಗತ್ಯ ಕಾಮಗಾರಿಯಾಗಿದೆ. ಈ ಪ್ರದೇಶವು ಎತ್ತರ ತಗ್ಗು ಇರುವುದರಿಂದ ರಸ್ತೆ ನಿರ್ಮಾಣ ಬಹು ದೊಡ್ಡ ಸವಾಲು. ದಿನನಿತ್ಯದ ಕೆಲಸಗಳಿಗೆ ಇಲ್ಲಿನ ಜನರು ತೀವ್ರ ತೊಂದರೆ ಅನುಭವಿಸುತ್ತಿರುವುದು ನನ್ನ ಗಮನದಲ್ಲಿದೆ. ಮೊದಲು ಇಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಿಸಿ ನಂತರ ರಸ್ತೆ ನಿರ್ಮಿಸುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ.

ಸ್ಥಳೀಯ ಬಿಜೆಪಿ ಮುಖಂಡರಾದ ಚಂದ್ರಶೇಖರ ಬಜಾಲ್‌ರವರ ವಿಶೇಷ ಮನವಿ ಮೇರೆಗೆ ಈ ಕಾಮಗಾರಿ ನಡೆಯುತ್ತಿದ್ದು, ಈ ಹಿಂದಿನ 2022-23 ನೇ ಸಾಲಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರುಗೊಂಡಿರುವ ಕಾಮಗಾರಿಯಾಗಿದೆ ಎಂದಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಪ್ರಮುಖರಾದ ಪ್ರವೀಣ್ ನಿಡ್ಡೇಲ್, ಸುಕೇಶ್, ಸುರೇಶ್ ರಾವ್, ಶಿವಾನಂದ, ರಹೀಮ್, ಲಕ್ಷ್ಮಿ, ಸರಸ್ವತಿ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!