ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಹಿರಿಯ ಯಕ್ಷಗಾನ ವಿದ್ವಾಂಸ ಶ್ರೀ ಸೂರಿಕುಮೇರು ಕೆ. ಗೋವಿಂದ ಭಟ್ ನಿಧನ!

ತೆಂಕುತ್ತಿಟ್ಟು ಯಕ್ಷಗಾನ ಶೈಲಿಯ ಅಪ್ರತಿಮ ಕಲಾತಪಸ್ವಿ, ದಶಕಗಳ ಕಾಲ ರಂಗಸ್ಥಳವನ್ನು ಆಳಿದ ಹಿರಿಯ ವಿದ್ವಾಂಸ ಶ್ರೀ ಸೂರಿಕುಮೇರು ಕೆ. ಗೋವಿಂದ ಭಟ್ ಅವರು ಇಂದು ನಿಧನ ಹೊಂದಿದ್ದಾರೆ.

ಹೌದು..ಏಳು ದಶಕಗಳ ಕಾಲ ರಂಗಸ್ಥಳವನ್ನೇ ಉಸಿರಾಗಿಸಿಕೊಂಡಿದ್ದ, ತೆಂಕುತಿಟ್ಟಿನ ಅದ್ವಿತೀಯ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ (85) ಅವರು ಗೆಜ್ಜೆ ಕಳಚಿ ಕಣ್ಮರೆಯಾಗಿದ್ದಾರೆ. ಯಕ್ಷಗಾನದ ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು ಸಿದ್ದಹಸ್ತರು. ಇವರು 1940, ಮಾರ್ಚ್ 22ರಂದು ಬಂಟ್ವಾಳದ ಕೋಡಪದವಿನ ಕಡು ಬಡತನದ ಕುಟುಂಬದಲ್ಲಿ ಜನಿಸಿದ ಗೋವಿಂದರ ಬಾಲ್ಯ ಕಣ್ಣೀರಿನ ಕತೆಯಾಗಿತ್ತು. ತಂದೆಯ ಅನಾರೋಗ್ಯ, ಆಸ್ತಿಗಾಗಿ ನಡೆದ ಸಂಘರ್ಷ, ಹೋಟೆಲ್‌ನಲ್ಲಿ ಎಂಜಲು ತಟ್ಟೆ ತೊಳೆದ ನೋವು ಹೀಗೆ ಹಸಿವಿನ ಕಿಚ್ಚಿನಲ್ಲೇ ಬೆಂದ ಜೀವವದು. ನಂತರ 1951ರಲ್ಲಿ ಬಾಲಗೋಪಾಲ ವೇಷದ ಮೂಲಕ ಧರ್ಮಸ್ಥಳ ಮೇಳದಲ್ಲಿ ಆರಂಭವಾದ ಅವರ ಕಲಾ ಪಯಣ, ಯಕ್ಷಗಾನದ ಇತಿಹಾಸದಲ್ಲೇ ಒಂದು ದಾಖಲೆಯಾಗಿ ಉಳಿಯುವಂಥದ್ದು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!