ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪ್ರಖ್ಯಾತ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ ಹೃದಯಾಘಾತದಿಂದ ನಿಧನ..!

ಪ್ರಖ್ಯಾತ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ ಅವರು ತಮ್ಮ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ನಡೂರು ಗ್ರಾಮದ ನಿವಾಸಿಯಾಗಿರುವ ಪ್ರಕಾಶ್ ಕುಲಾಲ್ ಅತ್ಯಂತ ಚುರುಕಿನ, ಪ್ರತಿಭಾಶಾಲಿ ಯುವ ಭಜನಾ ತರಬೇತುದಾರರಾಗಿದ್ದರು. ಭಜನಾ ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಮಲಗಿದ್ದರು. ಅವರಿಗೆ ಆತ್ಮೀಯರೊಬ್ಬರು ಕರೆ ಮಾಡಿದಾಗ ಕರೆ ಸ್ವೀಕರಿಸದಿದ್ದಾಗ ಅನುಮಾನಗೊಂಡು ಮನೆಯ ಮಾಡಿನ ಹಂಚು ತೆಗೆದು ಒಳಗೆ ಹೋಗಿ ನೋಡಿದಾಗ ಪ್ರಕಾಶ್ ಅವರು ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಪ್ರಕಾಶ್ ಕುಲಾಲ್ ಅತಿದೊಡ್ಡ ಭಜನಾ ಕಾರ್ಯಕ್ರಮಗಳಲ್ಲಿ ಒಂದಾದ ಸಂಕೀರ್ತನ ಮಂದಾರ್ತಿ ಸೇರಿ ಹತ್ತು ಹಲವು ಕಡೆಗಳಲ್ಲಿ ತಮ್ಮನ್ನು ಭಜನೆಗಾಗಿ ಸಮರ್ಪಿಸಿಕೊಂಡ ಯುವಕ. ಯಾವುದೇ ಹಣ ಅಥವಾ ಇತರ ಫಲಾಪೇಕ್ಷೆಗಳಿಲ್ಲದೆ ಭಜನಾ ತರಬೇತಿ ನೀಡುತ್ತಿದ್ದ, ತನ್ನ ಹೆಚ್ಚಿನ ಸಮಯವನ್ನು ಭಜನೆಗಾಗಿ ಮೀಸಲಿಡುತ್ತಿದ್ದರು. ಮೃತರು ಪತ್ನಿ, ಮಗು ಮತ್ತು ಪೋಷಕರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!