ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಮನೆಗೆ ನುಗ್ಗಿ ವ್ಯಕ್ತಿಗೆ ಹ*ಲ್ಲೆ; ಆರೋಪಿಯ ಬಂಧನ….!

ಮಾ-25ರಂದು ಮನೆಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿ ಆತನ ಮೊಬೈಲ್ ಸುಳಿಗೆ ಮಾಡಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಉಳ್ಳಾಲ ಪೊಲೀಸರು ದಸ್ತಗಿರಿ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಉಳ್ಳಾಲ ಖಿಲ್ರಿಯಾ ನಗರ ನಿವಾಸಿ ನಿಫಾನ್ ಅಹ್ಮದ್ ಪಾಷ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ನಿಫಾನ್ ಕಳೆದ ಫೆಬ್ರವರಿ 5 ರಂದು ಮಧ್ಯರಾತ್ರಿ ತನ್ನ ಸಹವರ್ತಿಗಳಾದ ನಿಝಪತ್ ಅಲಿ ಮತ್ತು ಅಮೀರ್ ಸುಹೈಲ್ ಜೊತೆ ಸೇರಿ ಕೋಟೆಪುರದ ಮಹಮ್ಮದ್ ತಸ್ವೀರ್ ಎಂಬವರ ಮನೆಗೆ ನುಗ್ಗಿದ್ದಲ್ಲದೆ, ತಸ್ವೀರ್ಗೆ ಹಲ್ಲೆಗೈದು ಅವರ ಮೊಬೈಲ್ ಫೋನನ್ನು ದೋಚಿರುವ ಕುರಿತಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2024 ರ ಡಿಸೆಂಬರ್ ತಿಂಗಳಲ್ಲಿ ತನ್ನ ಕಾರನ್ನ ತಡೆದು ನಿಲ್ಲಿಸಿದ ನೆಪದಲ್ಲಿ ಸಹಚರರೊಂದಿಗೆ ಸೇರಿ ತಲಪಾಡಿ ಟೋಲ್‌ಗೇಟ್ ನ ಸಿಬ್ಬಂದಿಗಳಿಗೂ ಹಲ್ಲೆ ನಡೆಸಿರುವ ಕುರಿತಂತೆ ಬಂಧಿತ ಆರೋಪಿ ನಿಫಾನ್ ಅಹ್ಮದ್ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!