ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಕಾರು ಹಾಗೂ ಟ್ರಕ್ ನಡುವೆ ಅಪಘಾತ ನಡೆದಿದ್ದು ಅಪಘಾತದಲ್ಲಿ ಬೆಂಗಳೂರಿನ ಮಮತಾ ಹಾಗೂ ಧೃತಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾನ್ನವಿ ಹಾಗೂ ರಾಘು ಸಹಿತ ಮತ್ತಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾವನ್ನಪ್ಪಿದವರು ಮತ್ತು ಗಾಯಾಳುಗಳ ಕುಟುಂಬ ಸದಸ್ಯರು ಬೆಂಗಳೂರಿನವರಾಗಿದ್ದು, ರಜೆ ನಿಮಿತ್ತ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ಅಲ್ಲಿಂದ ಮುರುಡೇಶ್ವರ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಎಂ ಎಚ್ ಐ ತುರ್ತು ಸ್ಪಂದನ ತಂಡದ ಎರಡು ಅಂಬುಲೆನ್ಸ್ ಗಳಲ್ಲಿ ಗಾಯಾಳುಗಳನ್ನು ಹಾಗೂ ಶವಗಳನ್ನು ಕುಂದಾಪುರ ಹಾಗೂ ಮಣಿಪಾಲ ಆಸ್ಪತ್ರೆ ಕೊಂಡೊಯ್ಯಲಾಯಿತು. ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ, ಬೈಂದೂರು ವೃತ್ತ ನಿರೀಕ್ಷಕರು, ಠಾಣಾಧಿಕಾರಿಗಳು, ಒನ್ ವನ್ ಟು ಸಿಬ್ಬಂದಿ, ಹೈವೇ ಪೆಟ್ರೋಲ್ ಸಿಬ್ಬಂದಿ ಮತ್ತು ಐ ಆರ್ ಬಿ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕರಲ್ಲಿ ಕೆಲವರು ಗಾಯಾಳುಗಳನ್ನು ಹಾಗೂ ಶವಸಾಗಾಟ ಮಾಡಲು ಸಹಕರಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!