ಜನ ಮನದ ನಾಡಿ ಮಿಡಿತ

Advertisement

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ ಅಧಿಕಾರಿ ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಶೆಟ್ಟಿ ಅವರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಶ್ರದ್ದಾಂಜಲಿ ಸಲ್ಲಿಸಲಾಯಿತು.

 

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ.ಅಜಿತ್ ಕುಮಾರ್ ರೈ ಮಾಲಾಡಿ ಅವರು ಮಾತನಾಡಿ, ರವೀಂದ್ರನಾಥ ಶೆಟ್ಟಿ ಅವರ ಅಗಲುವಿಕೆ ಸಮಾಜಕ್ಕೆ ಆದ ಬಲು ದೊಡ್ಡ ನಷ್ಟವಾಗಿದೆ. ಯೂನಿಯನ್ ಬ್ಯಾಂಕಿನ ಅಧ್ಯಕ್ಷರಿಂದ ಹಿಡಿದು ಸಾಮಾನ್ಯ ಸಿಬ್ಬಂದಿಗಳೊಂದಿಗೆ ಅನ್ಯೋನ್ಯ ಒಡನಾಟ ಹೊಂದಿದ್ದ ಅವರು ಬಂಟರ ಮಾತೃ ಸಂಘದಲ್ಲಿ ಪದಾಧಿಕಾರಿಯಾಗಿ ಸಲ್ಲಿಸಿರುವ ಸೇವೆ ಎಂದೂ ಮರೆಯಲಾಗದು ಎಂದರು.

ಮಾತೃ ಸಂಘದ ತಾಲೂಕು ಸಮಿತಿಯ ಮಾಜಿ ಸಂಚಾಲಕ ಜಯರಾಮ ಸಾಂತ ಮಾತನಾಡಿ, ರವೀಂದ್ರನಾಥ ಶೆಟ್ಟಿ ಅವರ ಪರೋಪಕಾರಿ ಮನೋಭಾವ ಸರ್ವರಿಗೂ ಮಾದರಿಯಾಗಿದೆ ಎಂದರು.

ಬಂಟರ ಮಾತೃ ಸಂಘದ ಮಾಜಿ ಕಾರ್ಯದರ್ಶಿ ವಸಂತ ಶೆಟ್ಟಿ ಅವರು ಮಾತನಾಡಿ, ಸಂಘದ ಕೋಶಾಧಿಕಾರಿಯಾಗಿ ಅನುಪಮ ಸೇವೆ ಸಲ್ಲಿಸಿದ್ದ ರವೀಂದ್ರನಾಥ ಶೆಟ್ಟಿ ಅವರು ಅನೇಕ ಕ್ರೀಡಾಪಟುಗಳಿಗೆ ತಮ್ಮ ಬ್ಯಾಂಕಿನಲ್ಲಿ ಉದ್ಯೋಗ ನೀಡಿ ಸಹೃದಯತೆ ಮೆರೆದವರು. ರಾಮಕೃಷ್ಣ ವಿದ್ಯಾ ಸಂಸ್ಥೆಗೆ ಅವರು ತಮ್ಮ ಬ್ಯಾಂಕ್ ವತಿಯಿಂದ ಮಹತ್ವದ ಕೊಡುಗೆ ನೀಡಿದ್ದಾರೆ ಎಂದರು.

ಡಾ.ಆಶಾ ಜ್ಯೋತಿ ರೈ ಅವರು ಮಾತನಾಡಿ, ನಗುಮುಖದ ನಿಷ್ಕಳಂಕ ವ್ಯಕ್ತಿತ್ವದ ರವೀಂದ್ರನಾಥ ಶೆಟ್ಟಿ ಅವರು ಎಲ್ಲರೊಂದಿಗೆ ಬೆರೆಯುವ ಉದಾತ್ತ ಮನೋಭಾವ ಹೊಂದಿದ್ದರು ಎಂದು ಹೇಳಿದರು.

ದಿವಾಕರ ಸಾಮಾನಿ ಚೇಳಾರ್ ಗುತ್ತು ಅವರು ಮಾತನಾಡಿ, ಸಕಾರಾತ್ಮಕ ವ್ಯಕ್ತಿತ್ವಹೊಂದಿದ್ದ ರವೀಂದ್ರನಾಥ ಶೆಟ್ಟಿ ಅವರು ಬಂಟರ ಮಾತೃ ಸಂಘ ಆಯೋಜನೆಯ ಶ್ರೀ ಗಣೇಶೋತ್ಸವದ ಯಶಸ್ಸಿಗೆ ಗಣನೀಯ ಕೊಡುಗೆ ನೀಡಿದ್ದಾರೆ ಎಂದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಕೋಶಾಧಿಕಾರಿ ಸಿ.ಎ.ರಾಮಮೋಹನ ರೈ, ಮಾಜಿ ಕಾರ್ಯದರ್ಶಿ ಎಂ.ಸುಂದರ ಶೆಟ್ಟಿ, ಹಿರಿಯ ಮುಂದಾಳು ಶೆಡ್ಡೆ ಮಂಜುನಾಥ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು. ಉಲ್ಲಾಸ್ ಶೆಟ್ಟಿ ಪೆರ್ಮುದೆ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!