ಗೂಡ್ಸ್ ರಿಕ್ಷಾ ಹಾಗೂ ದ್ವಿಚಕ್ರವಾಹನದ ನಡುವೆ ನಡೆದ ಅಪಘಾತಕ್ಕೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕುಕ್ಕಾಜೆ ಎಂಬಲ್ಲಿ ನಡೆದಿದೆ.

ಕುಕ್ಕಾಜೆಯ ಪಂಜಾಜೆ ನಿವಾಸಿ ಮನೀಶ್ ಮೃತಪಟ್ಟ ಯುವಕನಾಗಿದ್ದಾನೆ. ಮೆಲ್ಕಾರ್ ಕಡೆಯಿಂದ ಸ್ನೇಹಿತ ಉದಯ ಎಂಬವರ ಜೊತೆ ಕುಕ್ಕಾಜೆ ಮನೆಯ ಕಡೆ ಸಂಚಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಹಸವಾರನಾಗಿದ್ದ ಮನೀಶ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಸವಾರ ಉದಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಆದರ್ಶ್ ಬೇಟಿ ನೀಡಿದ್ದಾರೆ.



