ಜನ ಮನದ ನಾಡಿ ಮಿಡಿತ

Advertisement

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು, ಒಂದು ವರ್ಷದ ನಂತರ ಘಟನೆ ಬೆಳಕಿಗೆ ಬಂದಿದೆ.

ಮೃತ ನುಣಕಮ್ಮ ಎಂಬುವವರ ಅಣ್ಣನ ಮಗಳು ನಾಗಲಕ್ಷ್ಮಿ ಮತ್ತು ಆಕೆಯ ಪ್ರಿಯಕರ, ಆಂಧ್ರಪ್ರದೇಶದ ಮಡಕಸಿರ ನಿವಾಸಿ ಅಶೋಕ್ ಕುಮಾರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ನುಣಕಮ್ಮ ಅವರಿಗೆ ಗಂಡ ಮತ್ತು ಮಕ್ಕಳಿರಲಿಲ್ಲ, ಅವರು ತಮ್ಮ ಅಣ್ಣನ ಮನೆಯಲ್ಲಿ ವಾಸವಿದ್ದರು. ಸೆಪ್ಟೆಂಬರ್ 20 ನುಣಕಮ್ಮ ಅವರಿಗೆ ಪಿಡ್ಸ್ ಬರುತ್ತಿದೆ, ಚಿಕಿತ್ಸೆ ಕೊಡಿಸುತ್ತೇವೆ ಎಂದು ನಂಬಿಸಿದ ಆರೋಪಿಗಳು ಅವರನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ನುಣಕಮ್ಮಳ ಬಳಿ ಇದ್ದ ಮನೆಯ ಬೀರು ಬೀಗ ತೆಗೆದುಕೊಂಡು, ಆಕೆಯ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ ಮಾಡಿ ನೆಮ್ಮದಿಯಾಗಿದ್ದರು. ಕೊಲೆ ಮಾಡಿದ ನಾಲ್ಕು ದಿನಗಳ ನಂತರ ಮತ್ತೆ ವಾಪಸ್ ಬಂದು ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಗುರುತು ಸಿಗದಂತೆ ಮಾಡಿದ್ದರು. ನಂತರ ಏನು ಗೊತ್ತಿಲ್ಲದಂತೆ ವರ್ತಿಸುತ್ತಿದ್ದರು. ಆದರೆ ಪೊಲೀಸರು ವರ್ಷದ ನಂತರ ಇಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಅರಣ್ಯದಲ್ಲಿ ಪತ್ತೆಯಾಗಿದ್ದ ಬುರುಡೆ ಮತ್ತು ಮೂಳೆಗಳ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು, ಸುಮಾರು ಒಂದು ವರ್ಷದ ನಂತರ ಮೃತ ಮಹಿಳೆಯ ಗುರುತು ಪತ್ತೆಹಚ್ಚಿ ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

ಬಂಟ್ವಾಳ: ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಸರಣಿ ಅಪ*ಘಾತ….!

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

ಹುಣಸೂರು: ಹುಣಸೂರು ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….!

ಉಡುಪಿ: ಲಾರಿ- ಕಾರು ಮಧ್ಯೆ ಭೀಕರ ಅಪಘಾತ: ಓರ್ವ ಮೃ*ತ್ಯು…!

error: Content is protected !!