ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ದಿಶಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲಜೀವನ್ ಮಿಷನ್ ಹಾಗೂ ಆಯುಷ್ಮಾನ್ ಭಾರತ್ ಯೋಜನೆಗಳ ಜಾರಿಯಲ್ಲಿ ರಾಜ್ಯ ಸರ್ಕಾರ ಅಸಡ್ಡೆ ತೋರಿಸುತ್ತಿದೆ ಎಂದು ಹೇಳಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಕುರಿತು ತಪ್ಪು ಮಾಹಿತಿ ನೀಡುವುದರಿಂದ ಮಹಿಳೆಯರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ ಅವರು, ಇದೇ ರೀತಿಯಲ್ಲಿ ಕೇಂದ್ರದ ಯೋಜನೆಗಳ ಜಾರಿಯಲ್ಲಿಯೂ ಜನರಿಗೆ ಅನ್ಯಾಯವಾಗಬಾರದು ಎಂದು ಎಚ್ಚರಿಸಿದ್ದಾರೆ. ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.



