ಸಜೀಪ ಮೂಡದ ಪೆರ್ವ ಸಮೀಪದ ಕೊಯಿಲ ಎಂಬಲ್ಲಿ ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ.

ಪೆರ್ವ ರಸ್ತೆ ಬದಿಯ ಗಿಡಗಂಟಿಗಳಿಗೆ ಆಕಸ್ಮಿಕವಾಗಿ ಹಚ್ಚಿಕೊಂಡ ಬೆಂಕಿ ಜೋರಾಗಿ ಉರಿಯುತ್ತಾ, ಹತ್ತಿರದ ಅಡಿಕೆ ತೋಟಕ್ಕೆ ಕೂಡ ಆವರಿಸಿದೆ. ಇನ್ನು ಬೆಂಕಿಯ ಜ್ವಾಲೆಯನ್ನು ಕಂಡ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಇದೇ ವೇಳೆ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಟ್ರಾಫಿಕ್ ಎಸ್.ಐ.ಆದರ್ಶ್ ಅವರು ಬೆಂಕಿಯನ್ನು ನಂದಿಸಲು ಅಗ್ನಿ ಶಾಮಕ ದಳದವರನ್ನು ಕರೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಬಂದಿದ್ದರಿಂದ ಅಡಿಕೆ ಮರಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ.



