ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.

ನೇತ್ರಾವತಿ ಹೊಸ ಸೇತುವೆಯ ಕೆಳಭಾಗದಲ್ಲಿ ಸುಮಾರು 60 ವರ್ಷ ವಯಸ್ಸಿನ ಗಂಡಸಿನ ಶವವೊಂದು ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಕಂಡು ಬಂದಿದೆ. ಈ ಬಗ್ಗೆ ಈಶ್ವರ ಮಲ್ಪೆಯವರಿಗೆ ಮಾಹಿತಿ ಸಿಕ್ಕಿದ್ದು, ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದರೆ ಶವವನ್ನು ಮೇಲಕ್ಕೆ ಎತ್ತಲು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಸಾಧ್ಯವಾಗದೆ ಇದ್ದಾಗ, ಆಪತ್ಬಾಂಧವ ನೇತ್ರಾವತಿ ವೀರರಾದ ನಿಶಾರ್ ಎಂ.ಕೆ ಇಬ್ರಾಹಿಂ ಅವರು ತನಗೆ ಅಪಘಾತದಲ್ಲಿ ಕಾಲಿಗೆ ನೋವಾಗಿದ್ದರು ಲೆಕ್ಕಿಸದೆ ಶವವನ್ನು ಮೇಲಕ್ಕೆತ್ತಿದ್ದಾರೆ. ಇವರ ಮಾನವೀಯ ಕಾರ್ಯಕ್ಕೆ ಎಲ್ಲಡೆ ಪ್ರಶಂಸೆ ವ್ಯಕ್ತವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.



