ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರ ಸಾ*ವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸವಳಂಗ ರಸ್ತೆಯ ಕೊಮ್ಮನಾಳು ತಿರುವಿನಲ್ಲಿ ನಡೆದಿದೆ.

ದಾವಣಗೆರೆಯ ನ್ಯಾಮತಿಯ ಹಳೇಜೋಗದ ಶಿವಕುಮಾರ್ ಮೃ*ತ ಬೈಕ್ ಸವಾರ. ಶಿವಮೊಗ್ಗದಿಂದ ತನ್ನ ಗ್ರಾಮ ಹಳೇಜೋಗಕ್ಕೆ ಶಿವಕುಮಾರ್ ತೆರಳುತ್ತಿದ್ದರು. ಈ ವೇಳೆ ಹೊನ್ನಾಳಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಖಾಸಗಿ ಬಸ್, ಶಿವಕುಮಾರ್ ಸಂಚರಿಸುತ್ತಿದ್ದ ಬೈಕ್ ಕೊಮ್ಮನಾಳು ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಡಿ*ಕ್ಕಿಯ ರಭಸಕ್ಕೆ ಶಿವಕುಮಾರ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.



