ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಶಕ್ಕೆ ಪಡೆದ ಪೊಲೀಸರು ಎರಡು ಜಾನುವಾರುವನ್ನು ವಶಕ್ಕೆ ಪಡೆದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಪಂಜರಕೋಡಿ ಎಂಬಲ್ಲಿ ನಡೆದಿದೆ.

ಬಳಿಕದ ಬೆಳವಣಿಗೆಯಲ್ಲಿ ಜಾನುವಾರು ಸಾಗಾಟ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ ಕಾರು ಚಾಲಕ ವಾಹನವನ್ನು ಪೊಲೀಸರ ಮೇಲೆ ಹತ್ತಿಸಲು ಪ್ರಯತ್ನಿಸಿದ ಘಟನೆಯೂ ನಡೆದಿದೆ. ಘಟನೆಗೆ ಸಂಬ0ಧಿಸಿದ0ತೆ ಆರೋಪಿ ಚಾಲಕ ಬಂಟ್ವಾಳ ತಾಲೂಕು ಬಾಳೆಪುಣಿ ನಿವಾಸಿ ಮೊಹಮ್ಮದ್ ಹನೀಪ್ ಹಾಗೂ ಕಾರು ಚಾಲಕ ಬಶೀರ್ ಎಂಬವರ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಹನವೊಂದರಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿರುವ ಬಗ್ಗೆ ಮೇ. 21ರಂದು ವಿಟ್ಲ ಪೊಲೀಸ್ ಠಾಣಾ ಎಸ್.ಐ. ರಾಮಕೃಷ್ಣ ರವರಿಗೆ ಖಚಿತ ಮಾಹಿತಿ ಲಭಿಸಿದ್ದು, ಅದರಂತೆ ಸಿಬ್ಬಂದಿಗಳೊ0ದಿಗೆ ಬಂಟ್ವಾಳ ಕೊಳ್ನಾಡು ಪಂಜರಕೋಡಿ ಎಂಬಲ್ಲಿ ಆ ದಾರಿಯಾಗಿ ಬಂದ ಪಿಕಪ್ ವಾಹಮವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಅದರಲ್ಲಿ ಎರಡು ಜಾನುವಾರುಗಳು ಪತ್ತೆಯಾಗಿದೆ.



